Advertisement

ಎರಡು ಡಬಲ್ ಡೆಕ್ಕರ್ ಬಸ್ ಗಳ ನಡುವೆ ಢಿಕ್ಕಿ: ಎಂಟು ಮಂದಿ ಸಾವು, ಹಲವರು ಗಂಭೀರ

08:46 AM Jul 25, 2022 | Team Udayavani |

ಬಾರಾಬಂಕಿ: ಎರಡು ಡಬಲ್ ಡೆಕ್ಕರ್ ಖಾಸಗಿ ಬಸ್‌ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

Advertisement

ವರದಿಗಳ ಪ್ರಕಾರ, ಲೋನಿ ಕತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣ್ ಪುರ್ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಎರಡೂ ಬಸ್ ಗಳು ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎದುರಿನಲ್ಲಿ ಹೋಗುತ್ತಿದ್ದ ಬಸ್ಸು ಏಕಾಏಕಿ ನಿಂತಾಗ, ವೇಗದಲ್ಲಿ ಹಿಂದಿನಿಂದ ಬಂದ ಬಸ್ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ:ಆಫ್ರಿಕಾ ಹಂದಿಜ್ವರದ ಭಯ: ಕೇರಳದಲ್ಲಿ ಹಂದಿಗಳ ಹತ್ಯೆ

ಬಾರಾಬಂಕಿ ಪೊಲೀಸ್ ತಂಡ ಅಪಘಾತ ಸ್ಥಳಕ್ಕೆ ಧಾವಿಸಿದೆ. ಸ್ಥಳದಲ್ಲಿ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರಂತದಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next