Advertisement

 ಗದಗದಲ್ಲಿ ಭೀಕರ ಅಪಘಾತ : 6 ಮಂದಿ ಯುವಕರ ದುರ್ಮರಣ 

06:21 AM Dec 30, 2018 | Team Udayavani |

ಗದಗ: ಕೊಪ್ಪಳ ರಸ್ತೆಯ ಅಡವಿಸೋಮಾಪುರ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಯುವಕರು ದಾರುಣವಾಗಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಎರಡು ಕಾರುಗಳ ಮಧ್ಯೆ ಮುಖಾಮುಖೀ ಢಿಕ್ಕಿ ಸಂಭವಿಸಿದ್ದು,ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಧಾರವಾಡದ ಹೆಬ್ಬಳ್ಳಿ ಅಗಸಿ ನಿವಾಸಿಗಳು ಎಂದು ತಿಳಿದು ಬಂದಿದ್ದು, ಆನಂದ ಬೆಟಗೇರಿ , ಸಿದ್ದು ಕೋರಿ ಶೆಟ್ಟಿ, ಮನೋಜ್‌ ಕುಮಾರ್‌ ಕರಡಿಗುಡ್ಡ, ಅಮೃತ ಮತ್ತು ಚನ್ನುವಾಡದ್‌ ಎಂದು ಗುರುತಿಸಲಾಗಿದೆ.

ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next