Advertisement

ಛಾತ್ ಪೂಜೆ; ಕಾಲ್ತುಳಿತಕ್ಕೆ ಸಿಲುಕಿ ಮಗು ಸೇರಿದಂತೆ ಇಬ್ಬರು ಮಕ್ಕಳ ಸಾವು

09:58 AM Nov 04, 2019 | Nagendra Trasi |

ಪಾಟ್ನ:ಛಾತ್ ಪೂಜಾ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಕೆಲವು ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಔರಂಗಬಾದ್ ನಲ್ಲಿ ನಡೆದಿದೆ.

Advertisement

ಔರಂಗಬಾದ್ ನ ದೇಬ್ ನಲ್ಲಿರುವ ಸೂರ್ಯ ದೇವಸ್ಥಾನದಲ್ಲಿ ಛಾತ್ ಪೂಜೆಯಲ್ಲಿ ಪಾಲ್ಗೊಂಡ ನಂತರ ಭಕ್ತರು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ಕಾಲ್ತುಳಿತ ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಪಾಟ್ನದ ಆರು ವರ್ಷದ ಬಾಲಕ ಹಾಗೂ ಭೋಜ್ ಪುರದ ಒಂದೂವರೆ ವರ್ಷದ ಹೆಣ್ಣು ಮಗು ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ರಾಹುಲ್ ರಂಜನ್ ಮಹಿವಾಲ್ ಮತ್ತು ಹಿರಿಯ ಪೊಲೀಸ್ ಅಧಿಕಾರಿ ಬರ್ನಾವಾಲ್ ಸಂತ್ರಸ್ತ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ಆಕಸ್ಮಿಕವಾಗಿ ಈ ಘಟನೆ ಸಂಭವಿಸಿದೆ. ಸಂತ್ರಸ್ತ ಮಕ್ಕಳ ಕುಟುಂಬಕ್ಕೆ ಪರಿಹಾರ ಕೊಡಿಸುವುದಾಗಿ ಅಧಿಕಾರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next