Advertisement

August ತಿಂಗಳಿನಲ್ಲಿ 2 ಗ್ಯಾರಂಟಿ ಜಾರಿ

01:50 AM Jun 09, 2023 | Team Udayavani |

ಬೆಂಗಳೂರು: ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮೀ ಯೋಜನೆಗಳ ಪ್ರಾರಂಭಕ್ಕೆ ರಾಜ್ಯ ಸರಕಾರ ದಿನಾಂಕ ಘೋಷಣೆ ಮಾಡಿದೆ. ಬೆಂಗ ಳೂರಿ ನಲ್ಲಿ ಮಾತ ನಾಡಿದ ಮುಖ್ಯಮಂತ್ರಿ ಸಿದ್ದ ರಾಮಯ್ಯ, ಆ. 1ರಂದು ಕಲಬುರಗಿ ಯಲ್ಲಿ ಗೃಹಜ್ಯೋತಿ, ಆ. 17 ಯಾ 18ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡ ಲಾಗು ವುದು. ಜತೆಗೆ ಎಲ್ಲ ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸರಳಗೊಳಿಸಲಾಗುವುದು ಎಂದರು.

Advertisement

ಅನಗತ್ಯ ಮಾಹಿತಿ, ದಾಖಲೆ ಕೇಳಿ ಫ‌ಲಾನುಭವಿಗಳು ರೋಸಿ ಹೋಗುವಂಥ ಸನ್ನಿವೇಶ ಸೃಷ್ಟಿಸ ಬೇಡಿ. ಕುಂಟು ನೆಪ ಹೇಳಿ ಅರ್ಜಿ ಗಳನ್ನು ತಿರಸ್ಕರಿಸಬೇಡಿ ಎಂದು ಅಧಿಕಾರಿಗಳ ಜತೆಗೆ ಸಭೆ ನಡೆ ಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದರು.

ಮಕ್ಕಳು ತೆರಿಗೆದಾರರಾಗಿದ್ದರೆ ಇಲ್ಲ
ಮಕ್ಕಳು ತೆರಿಗೆ ಪಾವತಿದಾರರಾಗಿ ದ್ದರೆ ಆ ಕುಟುಂಬಕ್ಕೆ ಯೋಜನೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ಹೇಳಿಕೆ ನೀಡಿದ್ದಾರೆ. ಇದ ರಿಂದಾಗಿ ಗೃಹಲಕ್ಷ್ಮೀ ಯೋಜನೆ ಯಲ್ಲಿ ಮತ್ತೂಂದು ಗೊಂದಲ ಮೂಡಿದೆ.

ಸರಕಾರಿ ನೌಕರರು ತೆರಿಗೆ ಪಾವ ತಿಸುತ್ತಾರೆ. ಹೀಗಾಗಿ ಅವರಿಗೆ ಯೋಜನೆ ಅನ್ವಯವಾಗುವುದಿಲ್ಲ. ಎಪಿಎಲ್‌ ಕಾರ್ಡ್‌ದಾರರ ಪೈಕಿ 11 ಲಕ್ಷ ಜನರು ತೆರಿಗೆದಾರರಾಗಿದ್ದಾರೆ. ಮುಂದಿನ ದಿನಗಳಲ್ಲಿ ಎಪಿಎಲ್‌ ಕಾರ್ಡ್‌ದಾರರೂ ಯೋಜನೆ ವ್ಯಾಪ್ತಿಗೆ ಬರುವಂತೆ ನಿಯಮ ರೂಪಿಸ ಲಾಗುವುದು. ಶೇ. 85ರಿಂದ ಶೇ. 88ರಷ್ಟು ಮಹಿಳೆಯರಿಗೆ ಈ ಯೋಜನೆ ತಲುಪಲಿದೆ ಎಂದು ಹೆಬ್ಟಾಳ್ಕರ್‌ ವಿವರಿಸಿದರು.

ಮುಂದಿನ ದಿನಗಳಲ್ಲಿ ಬಿಪಿಎಲ್‌ ಕಾರ್ಡ್‌ ರಹಿತ ಮಹಿಳೆಯರನ್ನೂ ಪರಿಗಣಿಸುತ್ತೇವೆ. ಕೆಲವರು ಈಗ ಬಿಪಿಎಲ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿ¨ªಾರೆ. ಕೆಲವರ ಬಳಿ ಬಿಪಿಎಲ್‌ ಕಾರ್ಡ್‌ ಇಲ್ಲ. ಸುಮ್ಮನೆ ಅರ್ಜಿ ತಿರಸ್ಕರಿಸುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಸರಕಾರ ಕೊಟ್ಟ ಭರವಸೆಯನ್ನು ಈಡೇರಿಸುವ ಕೆಲಸ ಮಾಡಲಿದೆ ಎಂದು ಹೆಬ್ಟಾಳ್ಕರ್‌ ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next