Advertisement

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಇಬ್ಬರು ಯೋಧರು ಹುತಾತ್ಮ

09:52 AM Oct 22, 2019 | keerthan |

ಶ್ರೀನಗರ: ಪಾಕಿಸ್ಥಾನ ಮತ್ತೆ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಹುತಾತ್ಮರಾದ ಘಟನೆ ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ರವಿವಾರ ಬೆಳಗ್ಗೆ ನಡೆದಿದೆ.

Advertisement

ಗಡಿಯಲ್ಲಿ ಪಾಕಿಸ್ಥಾನದ ಅಪ್ರರಚೋದಿತ ಗುಂಡಿನ ದಾಳಿಯಿಂದಾಗಿ ಓರ್ವ ನಾಗರಿಕ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ಪಾಕ್ ಸೇನೆ, ಭಾರತದ ಗಡಿಯೊಳಗೆ ಭಾರಿ ಗುಂಡಿನ ದಾಳಿ ಆರಂಭಿಸಿದ್ದು ರವಿವಾರ ಮುಂಜಾನೆ ನಾಲ್ಕು ಗಂಟೆಯ ವರೆಗೂ ಮುಂದುವರಿದಿದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next