Advertisement

ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಓರ್ವ ಸಾವು

08:52 PM Sep 14, 2022 | Team Udayavani |

ಪಾಟ್ನಾ/ಬೆಗುಸರೈ: ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹಲವೆಡೆ ಗುಂಡಿನ ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬಿಹಾರದ ಬೆಗೂಸರಾಯ್‌ ನಗರದಲ್ಲಿ ಬುಧವಾರ ನಡೆದಿದೆ.

Advertisement

ಘಟನೆಯಲ್ಲಿ ಕನಿಷ್ಠ 11  ಮಂದಿ ಗಾಯಗೊಂಡು ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೊಂದು ಅಮೆರಿಕ ಮಾದರಿಯ ಘಟನೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಬೆಳವಣಿಗೆ ಬಿಹಾರದಲ್ಲಿ ರಾಜಕೀಯದ ಕಾವು ಪಡೆದುಕೊಂಡಿದೆ.  ಈ ಕುರಿತು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಮಾತನಾಡಿ  “ಮಹಾಘಟಬಂಧನ ಸರ್ಕಾರ ರಚನೆಯಾದಾಗಲೆಲ್ಲ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ. ಆರೋಪಿಗಳು 30ಕಿ.ಮೀ. ದೂರ ಪ್ರಯಾಣಿಸುತ್ತಾ ಗುಂಡಿನ ದಾಳಿ ನಡೆಸಿದ್ದರೂ ಅವರನ್ನು ವಶಪಡಿಸಿಕೊಳ್ಳಲು ಪೊಲೀಸರಿಗೆ ಸಾಧ್ಯವಾಗಿಲ್ಲ’ ಎಂದು ತಿಳಿಸಿದ್ದಾರೆ.

ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರು ಡಿಜಿಪಿ ಜತೆ ಮಾತನಾಡಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಏಳು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next