Advertisement

ಅನಾರೋಗ್ಯದಿಂದ 2 ತಿಂಗಳ ಬಾಣಂತಿ ಸಾವು

08:56 PM Jun 27, 2021 | Team Udayavani |

ಪುತ್ತೂರು: ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಕೃಷ್ಣನಗರದಲ್ಲಿ ನಡೆದಿದೆ.

Advertisement

ಪುತ್ತೂರು ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್ ಮೃತಪಟ್ಟವರು. 2 ತಿಂಗಳ ಹಿಂದೆಯಷ್ಟೆ ಅವರು ಮಗುವಿಗೆ ಜನ್ಮ ನೀಡಿದ ಬಳಿಕ ಅನಾರೋಗ್ಯದಿಂದಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಕ್ಷತಾರ ತವರು ಮನೆ ಉಪ್ಪಿನಂಗಡಿಯಾಗಿದ್ದು, ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯಲ್ಲಿ ಬಿಕಾಂ ಪದವಿಯನ್ನು ಪಡೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next