Advertisement

ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ

09:10 AM Aug 20, 2022 | Team Udayavani |

ಹೊಸದಿಲ್ಲಿ: ಶ್ರೀ ಕೃಷ್ಣ ಜನ್ಮಾಷ್ಟಮಿ ವಿಶೇಷ ಪೂಜೆಯ ವೇಳೆ ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿ ನಡೆದ ನೂಕುನುಗ್ಗಲಿನಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ ನಾಲ್ವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಮಥುರಾದ ಬಂಕೆ ಬಿಹಾರಿ ದೇವಸ್ಥಾನದಲ್ಲಿ ಸಂಭವಿಸಿದೆ.

Advertisement

ಬಂಕೆ ಬಿಹಾರಿ ದೇವಸ್ಥಾನದಲ್ಲಿ ಶುಕ್ರವಾರ ಮಧ್ಯರಾತ್ರಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ವೇಳೆ ನಡೆದ ಮಂಗಳಾರತಿ ವೇಳೆ ನಡೆದ ನೂಕುನುಗ್ಗಲಿನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತೀ ವರ್ಷ ಜನ್ಮಾಷ್ಠಮಿಯ ದಿನದಂದು ಇಲ್ಲಿಗೆ ಲಕ್ಷಾಂತರ ಭಕ್ತರ ದಂಡೇ ಹರಿದುಬರುತ್ತದೆ ಅದರಂತೆ ದೇವರ ಪೂಜೆಯ ಸಮಯದಲ್ಲಿ ಭಕ್ತರ ದಂಡು ದೇವಸ್ಥಾನದೊಳಗೆ ಬಂದ ಪರಿಣಾಮ ನೂಕುನುಗ್ಗಲು ಸಂಭವಿಸಿದೆ.

ಇದನ್ನೂ ಓದಿ : ಪ್ರಿಯತಮೆ ಬಯಸಿ ಸುಪಾರಿ ಕೊಟ್ಟು, ಭಯದಿಂದ ಆತಹತ್ಯೆ ಮಾಡಿಕೊಂಡ!

Advertisement
Advertisement

Udayavani is now on Telegram. Click here to join our channel and stay updated with the latest news.

Next