Advertisement

ಕಾಂಗ್ರೆಸ್‌ ಶಾಸಕರು ಪಕ್ಷ ಸೇರಿದ್ದು ಸರಿ

01:06 AM Jun 08, 2019 | Team Udayavani |
ಹೈದರಾಬಾದ್‌: ತೆಲಂಗಾಣ ವಿಧಾನಸಭೆಯಲ್ಲಿರುವ 18 ಕಾಂಗ್ರೆಸ್‌ ಶಾಸಕರ ಪೈಕಿ 12 ಮಂದಿ ಪಕ್ಷಕ್ಕೆ ಸೇರಿರುವುದನ್ನು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಸಮರ್ಥಿಸಿಕೊಂಡಿದೆ. ಶಾಸಕರ ಮುಂದಿನ ರಾಜಕೀಯ ಭವಿಷ್ಯ ಮುಂದಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ನ ದುಃಸ್ಥಿತಿಗೆ ಆ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಯೇ ಕಾರಣ. ಅವರು ಪಕ್ಷವನ್ನು ಉತ್ತಮ ರೀತಿಯಲ್ಲಿ ಸಂಘಟನೆ ಮಾಡುತ್ತಿದ್ದರೆ, ಈ ಸ್ಥಿತಿ ಉಂಟಾಗುತ್ತಿರಲಿಲ್ಲ ಎಂದು ಪಕ್ಷದ ವಕ್ತಾರ ಅಬಿಡ್‌ ರಸೂಲ್ ಖಾನ್‌ ಶುಕ್ರವಾರ ತಿಳಿಸಿದ್ದಾರೆ. ಶಾಸಕರೇನೂ ಶಾಲಾ ಮಕ್ಕಳಲ್ಲ. ಟಿಆರ್‌ಎಸ್‌ ನೀಡುತ್ತಿರುವ ಉತ್ತಮ ಆಡಳಿತ, ಕಲ್ಯಾಣ ಕಾರ್ಯಕ್ರಮಗಳನ್ನು ಆಧರಿಸಿ ನಿರ್ಧಾರ ಕೈಗೊಂಡಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್‌ ಪ್ರತಿಭಟನೆ: ಇನ್ನೊಂದೆಡೆ, 12 ಮಂದಿ ಶಾಸಕರ ಪಕ್ಷಾಂತರ ಖಂಡಿಸಿ ಶುಕ್ರವಾರ ರಾಜ್ಯಾದ್ಯಂತ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ವಾರಂಗಲ್, ಕರೀಂನಗರ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸಿಎಂ ಚಂದ್ರಶೇಖರ್‌ ರಾವ್‌ ಅವರು ಪಕ್ಷಾಂತರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next