Advertisement

ಶ್ರೀನಗರ; ಮೂವರು ಉಗ್ರರನ್ನು ಹೊಡೆದುರುಳಿಸಿದ ಸಿಆರ್ ಪಿಎಫ್ ಪಡೆ, ಯೋಧ ಹುತಾತ್ಮ

09:19 AM Feb 06, 2020 | Nagendra Trasi |

ಶ್ರೀನಗರ: ಶ್ರೀನಗರದ ಹೊರವಲಯದಲ್ಲಿ ಬುಧವಾರ ಬೆಳಗ್ಗೆ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಮೂವರು ಉಗ್ರರು ಸಾವನ್ನಪ್ಪಿದ್ದು, ಪ್ರತಿ ದಾಳಿಯಲ್ಲಿ ಸಿಆರ್ ಪಿಎಫ್ ಯೋಧ ಹುತಾತ್ಮರಾಗಿರುವುದಾಗಿ ವರದಿ ತಿಳಿಸಿದೆ.

Advertisement

ಇಂದು ಮುಂಜಾನೆ 5ಗಂಟೆ ವೇಳೆಗೆ ಸಿಆರ್ ಪಿಎಫ್ ನ 73ನೇ ಬೆಟಾಲಿಯನ್ ನಾಕಾಬಂಧಿ ನಡೆಸುತ್ತಿದ್ದ ವೇಳೆ ಅಪರಿಚಿತ ಉಗ್ರರ ತಂಡ ಗುಂಡಿನ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಸಿಆರ್ ಪಿಎಫ್ ಯೋಧರು ಪ್ರತಿದಾಳಿ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದರು.

ಅಲ್ಲದೇ ಒಬ್ಬ ಉಗ್ರನನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಗ್ರೆನೇಡ್, ಶಸ್ತ್ರಾಸ್ತ್ರ ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಉಗ್ರರ ದಾಳಿಯಲ್ಲಿ ಬಿಹಾರ ಮೂಲದ ಸಿಆರ್ ಪಿಎಫ್ ಯೋಧ ರಮೇಶ್ ರಂಜನ್ ತಲೆಗೆ ಗುಂಡು ತಗುಲಿ ಹುತಾತ್ಮರಾಗಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next