Advertisement

ಶ್ರೀನಗರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಸಾವು

09:53 AM Mar 10, 2020 | sudhir |

ಶ್ರೀನಗರ: ಭದ್ರತಾಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಶೋಪಿಯಾನ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಹಾಗೂ ರೆಬಾನ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ ಉಗ್ರರಿಬ್ಬರು ಹತರಾಗಿದ್ದಾರೆ ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

Advertisement

ನುಸುಳುಕೋರನ ಸೆರೆ: ಗಡಿ ನಿಯಂತ್ರಣ ರೇಖೆ ಬಳಿ ಅಕ್ರಮ ನುಸುಳುತ್ತಿದ್ದ ಪಾಕಿಸ್ತಾನ ಪ್ರಜೆಯನ್ನು ಸೇನಾ ಪಡೆಗಳು ಬಂಧಿಸಿವೆ. ಪಾಕ್‌ ಅಕ್ರಮಿತ ಕಾಶ್ಮೀರದ ಕೋಟಿÉ ನಿವಾಸಿ ಫ‌ರಿಯಾದ್‌ ಅಲಿ(20), ಭಾನುವಾರ ರಾತ್ರಿ ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯ ಬಾಲಕೋಟ್‌ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುವಾಗ ಸೇನಾ ಪಡೆಗಳು ಬಂಧಿಸಿವೆ.

ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿರುವ ಪಾಕ್‌, ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶೆಲ್‌ ಮತ್ತು ಗುಂಡಿನ ದಾಳಿ ನಡೆಸಿದೆ. ಪೂಂಛ…ನಲ್ಲಿ ಸೇನಾ ನೆಲೆ ಹಾಗೂ ಗ್ರಾಮಗಳ ಮೇಲೆ ಪಾಕ್‌ ಸೈನಿಕರು ಅಪ್ರಚೋದಿತ ಶೆಲ್‌ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next