Advertisement

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

02:46 PM May 16, 2024 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಬಳಿ ಗುರುವಾರ ಭಾರತೀಯ ಸೇನೆ ನಡೆಸಿದ ಎನ್‌ಕೌಂಟರ್‌ ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದೆ ಎಂದು ವರದಿಯಾಗಿದೆ.

Advertisement

ಭಾರತೀಯ ಭದ್ರತಾ ಪಡೆ ಕಾರ್ಯಾಚರಣೆ ನಡೆಸುತ್ತಿರುವ ವೇಳೆ ಇಬ್ಬರು ದುಷ್ಕರ್ಮಿಗಳು ತಂಗ್‌ಧರ್ ಸೆಕ್ಟರ್‌ನ ಗಡಿ ಪ್ರದೇಶದಲ್ಲಿ ಒಳ ನುಸುಳುತ್ತಿರುವುದು ಕಂಡುಬಂದಿದೆ ಈ ವೇಳೆ ಎಚ್ಚರಿಕೆ ನೀಡಿದ ಭದ್ರತಾ ಪಡೆಯನ್ನು ಲೆಕ್ಕಿಸದೆ ನುಸುಳಲು ಯತ್ನಿಸಿದ್ದಾರೆ ಈ ವೇಳೆ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆ.

ಗುಪ್ತಚರ ಮಾಹಿತಿಯ ಮೇರೆಗೆ, ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಮ್ರೋಹಿ, ತಂಗ್‌ಧರ್‌ನಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಎರಡು ಪಿಸ್ತೂಲ್ ಸೇರಿದಂತೆ ಸ್ಫೋಟಕ ಸಾಮಗ್ರಿಗಳನ್ನು ತಂಡ ವಶಕ್ಕೆ ಪಡೆದುಕೊಂಡಿದೆ. ಭದ್ರತಾ ಪಡೆ ಗಡಿ ಭಾಗದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದೆ.

ಇದನ್ನೂ ಓದಿ: Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Advertisement

Udayavani is now on Telegram. Click here to join our channel and stay updated with the latest news.

Next