Advertisement

ಪಂಜಾಬ್ ಪ್ರಾಂತ್ಯದಲ್ಲಿ ಭೀಕರ ದುರಂತ: ರೈಲಿಗೆ ವ್ಯಾನ್ ಡಿಕ್ಕಿ, 19 ಸಿಖ್ ಯಾತ್ರಿಕರ ಸಾವು

06:00 PM Jul 03, 2020 | Nagendra Trasi |

ಲಾಹೋರ್(ಪಾಕಿಸ್ತಾನ): ಸಿಖ್ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವ್ಯಾನ್ ಮಾನವರಹಿತ ರೈಲ್ವೆ ಕ್ರಾಸಿಂಗ್ ನಲ್ಲಿ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಘಟನೆ ಶುಕ್ರವಾರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಶೇಕುಪುರ್ ಸಮೀಪದ ನಡೆದಿದೆ.

Advertisement

ರೈಲು, ವ್ಯಾನ್ ಭೀಕರ ಡಿಕ್ಕಿಯಲ್ಲಿ 15ಕ್ಕೂ ಅಧಿಕ ಮಂದಿ ಸಿಖ್ ಯಾತ್ರಿಕರು ಸಾವನ್ನಪ್ಪಿರುವುದಾಗಿ ಡೈಲಿ ಟೈಮ್ಸ್ ವರದಿ ಮಾಡಿದೆ. ಕರಾಚಿಯಿಂದ ಲಾಹೋರ್ ಗೆ ಆಗಮಿಸುತ್ತಿದ್ದ ಶಾ ಹುಸೈನ್ ಎಕ್ಸ್ ಪ್ರೆಸ್ ರೈಲಿಗೆ ಸಿಖ್ ಯಾತ್ರಾರ್ಥಿಗಳನ್ನು ತುಂಬಿಸಿಕೊಂಡು ಬಂದಿದ್ದ ವ್ಯಾನ್ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಅಧಿಕ ಜನರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ವರದಿಯ ಪ್ರಕಾರ, ವ್ಯಾನ್ ನಲ್ಲಿ 27 ಮಂದಿ ಯಾತ್ರಾರ್ಥಗಳು ಪ್ರಯಾಣಿಸುತ್ತಿದ್ದರು. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ. ಶವಗಳನ್ನು ರೈಲ್ವೆ ಅಧಿಕಾರಿಗಳು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಿದ್ದು, ಗಾಯಗೊಂಡ ಯಾತ್ರಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು
ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next