Advertisement

ರಾಜ್ಯದ 30 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂ. ಸಾಲ ನೀಡುವ ಗುರಿ : ಸಚಿವ ಸೋಮಶೇಖರ್

03:39 PM Apr 11, 2021 | Team Udayavani |

ಕಲಬುರಗಿ: ಪ್ರಸಕ್ತ ಮುಂಗಾರು-ಹಂಗಾಮಿಗೆ ರಾಜ್ಯದ 30 ಲಕ್ಷ ರೈತರಿಗೆ ಸುಮಾರು 20 ಸಾವಿರ ಕೋಟಿ ರೂ. ಡಿಸಿಸಿ ಬ್ಯಾಂಕ್ ಗಳ ಮೂಲಕ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಕಲಬುರಗಿ ಹೊರತು ಪಡಿಸಿ 27 ಲಕ್ಷ ರೈತರಿಗೆ 17,800 ಕೋಟಿ ಸಾಲ ನೀಡಲಾಗಿತ್ತು. ಈ ಬಾರಿ ರಾಜ್ಯದ 21 ಡಿ.ಸಿ.ಸಿ. ಬ್ಯಾಂಕ್ ಗಳನ್ನು ಪುನಶ್ಚೇತನಕ್ಕೆ ಸರ್ಕಾರದ ಬದ್ಧವಿದೆ ಎಂದರು.

ವಿವಿಧ ಕಾರಣದಿಂದ ನಿಷ್ಕ್ರೀಯ ಹಂತದಲ್ಲಿದ್ದ ಕಲಬುರಗಿ ಡಿಸಿಸಿ ಬ್ಯಾಂಕಿಗೆ ರಾಜ್ಯ ಸರ್ಕಾರವು 10 ಕೋಟಿ ರೂ. ಶೇರು ಹಣ ನೀಡಿದ್ದು, ಬ್ಯಾಂಕ್ ಪುನಶ್ಚೇತನಕ್ಕೆ ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಪ್ರಸ್ತುತ ಆಡಳಿತ ಮಂಡಳಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಇದರ ಪರಿಣಾಮ 187 ಕೋಟಿ ರೂ. ಸಾಲ ವಸೂಲಾತಿಯಾಗಿದೆ.‌ ಅಪೆಕ್ಸ್ ಬ್ಯಾಂಕ್ ಕೂಡ 200 ಕೋಟಿ ರೂ. ಸಾಲ ನೀಡಲು ಒಪ್ಪಿಗೆ ಸೂಚಿಸಿದೆ ಎಂದರು.

ರಾಜ್ಯ ಸರ್ಕಾರವೇ ಡಿಸಿಸಿ ಬ್ಯಾಂಕ್ ಗೆ 300 ಕೋಟಿ ರೂ. ಹೆಚ್ಚುವರಿ ಸಾಲ ನೀಡುವ ಮೂಲಕ ಬ್ಯಾಂಕಿಗೆ ಆರ್ಥಿಕ ಬಲ ನೀಡಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬ್ಯಾಂಕ್ ಬೇಡಿಕೆ ಅನುಗುಣವಾಗಿ ಹಂತ ಹಂತವಾಗಿ ರಾಜ್ಯ ಸರ್ಕಾರದಿಂದ ಹಣ ನೀಡಲಾಗುವುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next