Advertisement

ರಾಮಯ್ಯ ಆಸ್ಪತ್ರೆಯಲ್ಲಿ 200ಬೆಡ್‌ ಸೌಲಭ್ಯ

11:18 AM Apr 05, 2020 | Suhan S |

ಬೆಂಗಳೂರು: ರಾಜ್ಯದಲ್ಲಿ ಉಲ್ಬಣವಾಗುತ್ತಿರುವ ಕೋವಿಡ್ 19 ರೋಗದ ಚಿಕಿತ್ಸೆಗಾಗಿ ರಾಮಯ್ಯ ಆಸ್ಪ ತ್ರೆಯು ಸಿದ್ಧವಾಗಿದ್ದು, ಕೋವಿಡ್ 19 ವೈರಾಣು ಸೋಂಕಿತರ ಚಿಕಿತ್ಸೆಗಾಗಿ ಪ್ರತ್ಯೇಕವಾಗಿ 200 ಹಾಸಿಗೆಗಳನ್ನು ಒದಗಿಸುವುದಾಗಿ ಗೋಕುಲ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಆರ್‌. ಜಯರಾಂ ತಿಳಿಸಿದ್ದಾರೆ.

Advertisement

ಡಾ. ಜಯರಾಂ ನೇತೃತ್ವದ ತಂಡ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೋವಿಡ್‌-19 ಚಿಕಿತ್ಸೆಗಾಗಿ ಸರ್ಕಾರದ ಜೊತೆ ಕೈಜೋಡಿಸುವುದಾಗಿಭರವಸೆ ನೀಡಿದರು. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡುತ್ತಿರುವ ರಾಮಯ್ಯ ಸಂಸ್ಥೆ ಈ ಮಹಾಮಾರಿ ನಿಯಂತ್ರಣ ಮತ್ತು ಚಿಕಿತ್ಸೆಗಾಗಿ ಸರ್ಕಾರಕ್ಕೆ ಸಾಥ್‌ ನೀಡುತ್ತೇವೆ. ಕೊರೊನಾ ಚಿಕಿತ್ಸೆಗೆ ಅಗತ್ಯವಿರುವ ಚಿಕಿತ್ಸಾ ಕಿಟ್‌ ಹಾಗೂ ಇತರ ಸುರಕ್ಷಾ ಸಲಕರಣೆಗಳನ್ನು ಸರ್ಕಾರ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.

ರಾಜ್ಯ ಕಂದಾಯ ಸಚಿವ ಆರ್‌. ಅಶೋಕ್‌, ಗೋಕುಲ ಶಿಕ್ಷಣ ಪ್ರತಿಷ್ಠಾನ (ವೈದ್ಯಕೀಯ) ಮುಖ್ಯ ಕಾರ್ಯನಿರ್ವಾಹಕ ಎಂ.ಆರ್‌. ಶ್ರೀನಿವಾಸ ಮೂರ್ತಿ, ರಾಮಯ್ಯ ಮೆಮೋರಿಯಲ್‌ ಆಸ್ಪತ್ರೆ ಅಧ್ಯಕ್ಷ ಡಾ. ನರೇಶ್‌ ಶೆಟ್ಟಿ, ಅಸೋಸಿಯೇಟ್‌ ಡೀನ್‌ ಡಾ. ಹರೀಶ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next