Advertisement

ನೇಪಾಲ ಪ್ರವಾಹ: 200 ಭಾರತೀಯರು ಅತಂತ್ರ

06:35 AM Aug 14, 2017 | Team Udayavani |

ಕಾಠ್ಮಂಡು/ಗುವಾಹಾಟಿ: ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ನೇಪಾಲದಲ್ಲಿ ಸುಮಾರು 700 ಮಂದಿ ಪ್ರವಾಸಿಗರು ಅತಂತ್ರರಾಗಿದ್ದು, ಈ ಪೈಕಿ 200ಕ್ಕೂ ಹೆಚ್ಚು ಭಾರತೀಯರು ಸೇರಿದ್ದಾರೆ.

Advertisement

ನೇಪಾಲದ ಪ್ರಸಿದ್ಧ ಪ್ರವಾಸಿ ತಾಣವಾದ ಚಿತ್ವಾನ್‌ನಲ್ಲಿ ಮಳೆಯ ಅಬ್ಬರ ಮುಂದು ವರಿದ ಕಾರಣ, ಪ್ರವಾಹ ಉಂಟಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇಲ್ಲಿ ಮಳೆಯಿಂ ದಾಗಿ ಈಗಾಗಲೇ 55 ಮಂದಿ ಮೃತ ಪಟ್ಟಿ ದ್ದಾರೆ. 35 ಸಾವಿರಕ್ಕೂ ಹೆಚ್ಚು ಮನೆಗಳು ಮುಳುಗಡೆಯಾಗಿದ್ದು, ಸಾವಿ ರಕ್ಕೂ ಹೆಚ್ಚು ಮನೆಗಳು ಜಖಂಗೊಂಡಿವೆ. ಇಲ್ಲಿಗೆ ಪ್ರವಾಸಕ್ಕೆಂದು ಬಂದಿದ್ದ 600 ಮಂದಿಯಲ್ಲಿ 200ಕ್ಕೂ ಅಧಿಕ ಮಂದಿ ಭಾರತೀಯರಿದ್ದು, ಪ್ರವಾಹ ಪೀಡಿತ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವರ ರಕ್ಷಣೆಗೆ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಅಸ್ಸಾಂನಲ್ಲಿ ಮತ್ತೆ 10 ಸಾವು: ಇತ್ತ ಭಾರತದ ಈಶಾನ್ಯ ರಾಜ್ಯಗಳಲ್ಲೂ ವರುಣನ ಆರ್ಭಟ ತೀವ್ರಗೊಂಡಿದ್ದು, ಅಸ್ಸಾಂನಲ್ಲಿ ಮತ್ತೆ 10 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಪ್ರಸಕ್ತ ವರ್ಷ ಪ್ರವಾಹ ಸಂಬಂಧಿ ಘಟನೆಗಳಿಗೆ ಬಲಿಯಾದವರ ಸಂಖ್ಯೆ 99ಕ್ಕೇರಿದಂತಾಗಿದೆ. ಪ್ರಧಾನಿ ಮೋದಿ ಅವರು ಅಸ್ಸಾಂ ಸಿಎಂ ಸರ್ಬಾನಂದ ಅವರಿಗೆ ಕರೆ ಮಾಡಿ, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆಯ ನೆರವನ್ನೂ ಪಡೆಯಲಾಗಿದೆ. ಸಿಎಂ ಸರ್ಬಾನಂದ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ, ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next