Advertisement

200 ಜನೌಷಧ ಮಳಿಗೆ ಅರಂಭ: ರಮೇಶ್‌ಕುಮಾರ್‌

03:45 AM Jan 28, 2017 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ 200 ಜೆನರಿಕ್‌ ಔಷಧ ಮಳಿಗೆ ಆರಂಭಿಸಲು ಕೇಂದ್ರ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇವುಗಳ ಸ್ಥಾಪನೆಯ ಜವಾಬ್ದಾರಿಯನ್ನು ಎಂಎಸ್‌ಎಲ್‌ ಹಾಗೂ ರೆಡ್‌ಕ್ರಾಸ್‌ ವಹಿಸಿಕೊಂಡಿವೆ ಎಂದು ಆರೋಗ್ಯ ಸಚಿವ ರಮೇಶ ಕುಮಾರ್‌ ತಿಳಿಸಿದರು.

Advertisement

ವಿಮಾನ ನಿಲ್ದಾಣದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 146 ತಾಲೂಕು ಆಸ್ಪತ್ರೆ , 30 ಜಿಲ್ಲಾಸ್ಪತ್ರೆ ಹಾಗೂ ಕೆಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜೆನರಿಕ್‌ ಔಷಧ ಮಳಿಗೆ ಆರಂಭಿಸಲಾಗುವುದು ಎಂದರು.

ತುರ್ತು ಸಂದರ್ಭದಲ್ಲಿ ಬಳಕೆಯಾಗುವ 104 ಸೇವೆಯಲ್ಲಿ ಹಲವು ಸಮಸ್ಯೆಗಳಿವೆ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಶೀಘ್ರ ಸಮಸ್ಯೆ ಬಗೆಹರಿಸಲಾಗುವುದು. 15 ದಿನಗಳಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿಮೆಡಿಸಿನ್‌ ವ್ಯವಸ್ಥೆ ಜಾರಿಗೊಳಿಸಲಾಗುವುದು. ಮುಂದೆ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next