Advertisement

ಮಾಲೆಗಾಂವ್ ಸ್ಫೋಟ ಕೇಸ್; 9ವರ್ಷಗಳ ಬಳಿಕ ಜೈಲಿನಿಂದ ಪುರೋಹಿತ್ ರಿಲೀಸ್

11:56 AM Aug 23, 2017 | Team Udayavani |

ಮುಂಬೈ: 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕಳೆದ 9 ವರ್ಷಗಳಿಂದ ಜೈಲಿನಲ್ಲಿರುವ ಆರೋಪಿ ನಿವೃತ್ತ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಶ್ರೀಕಾಂತ್ ಪ್ರಸಾದ್ ಪುರೋಹಿತ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಟಾಲೋಜಾ ಜೈಲಿನಿಂದ ಬಿಡುಗಡೆಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಮಾಲೆಗಾಂವ್ ಸ್ಫೋಟದಲ್ಲಿ 7 ಮಂದಿ ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಜೈಲು ಸೇರಿದ್ದ ಲೆ.ಕರ್ನಲ್ ಪುರೋಹಿತ್ ಗೆ 9 ವರ್ಷಗಳ ನಂತರ ಸುಪ್ರೀಂಕೋರ್ಟ್ ಸೋಮವಾರ ಜಾಮೀನು ನೀಡಿತ್ತು. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಟಾಲೋಜಾ ಜೈಲಿನಿಂದ ಪುರೋಹಿತ್ ಬಿಡುಗಡೆಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಾನು ಮತ್ತೆ ಸೇನಾ ಸಮವಸ್ತ್ರ ಧರಿಸಲು ಬಯಸುತ್ತೇನೆ. ಸಮವಸ್ತ್ರ ನನ್ನಿಂದ ದೂರವಾಗಿದ್ದು, ಅದನ್ನು ನಾನು ಧರಿಸಲೇಬೇಕು ಎಂಬುದನ್ನು ಬಲವಾಗಿ ಸಮರ್ಥಿಸಿಕೊಂಡ ಪುರೋಹಿತ್, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ವಾಪಸ್ ಆಗುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಭಾರತೀಯ ಸೇನೆಯಂತಹ ಸಂಸ್ಥೆ ಇಡೀ ಜಗತ್ತಿನಲ್ಲೇ ಇಲ್ಲ ಎಂದು ಮಂಗಳವಾರ ಸೆಶನ್ಸ್ ಕೋರ್ಟ್ ಹೊರಗೆ ಸುದ್ದಿಗಾರರ ಜತೆ ಮಾತನಾಡುತ್ತ ಲೆ.ಕರ್ನಲ್ ಪುರೋಹಿತ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next