Advertisement

200ನೇ ವರ್ಷದ ಮಂಗಳೂರು ರಥೋತ್ಸವ

01:43 AM Feb 20, 2021 | Team Udayavani |

ಮಂಗಳೂರು: ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ 200ನೇ ವರ್ಷದ ಮಂಗಳೂರು ರಥೋತ್ಸವ ಶುಕ್ರವಾರ ಕಾಶೀ ಮಠಾಧೀಶರಾದ ಶ್ರೀಮತ್‌ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರಗಿತು.

Advertisement

ರಥ ಸಪ್ತಮಿಯ ಪರ್ವ ದಿನದಂದು ಬೆಳಗ್ಗೆ ಶ್ರೀ ದೇವರ ಸನ್ನಿಧಾನದಲ್ಲಿ ಮಹಾ ಪ್ರಾರ್ಥನೆ, ಪಂಚಾಮೃತ ಅಭಿಷೇಕ ನಡೆಯಿತು. ಅನಂತರ ಶ್ರೀಗಳಿಂದ ಶ್ರೀವೀರ ವೆಂಕಟೇಶ ದೇವರಿಗೆ ಶತ ಕಲಶಾಭಿಷೇಕ, ಗಂಗಾಭಿಷೇಕ, ಮಹಾ ಮಂಗಳಾರತಿ ಜರಗಿತು. ಮಹಾ ಯಜ್ಞದ ಪೂರ್ಣಾಹುತಿಯ ಬಳಿಕ ಸರ್ವಾಲಂಕಾರ ಭೂಷಿತ ಶ್ರೀ ವೀರ ವೆಂಕಟೇಶ ಹಾಗೂ ಶ್ರೀನಿವಾಸ ದೇವರು ಪುಷ್ಪಾಲಂಕೃತ ಸ್ವರ್ಣ ಪಲ್ಲಕಿಯಲ್ಲಿ ವಿರಾಜ ಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಸಾವಿರಾರು ಭಜಕರ ಸಮ್ಮುಖದಲ್ಲಿ ಮಂಗಳೂರು ರಥೋತ್ಸವ ಸಮಾಪನಗೊಂಡಿತು. ಸಹಸ್ರಾರು ಭಕ್ತರಿಗೆ ಸಮಾರಾಧನೆ ನಡೆಯಿತು.

 

 

Advertisement

Udayavani is now on Telegram. Click here to join our channel and stay updated with the latest news.

Next