Advertisement

ದ.ಕ ಜಿಲ್ಲೆಯಲ್ಲೂ 2013ರ ಫಲಿತಾಂಶ ಮರುಕಳಿಸಲಿದೆ: K C Venugopal

05:34 PM Apr 26, 2023 | Team Udayavani |

ಮಂಗಳೂರು: ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು, ದ.ಕ ಜಿಲ್ಲೆಯಲ್ಲೂ 2013ರ ಫಲಿತಾಂಶ ಮರುಕಳಿಸಲಿದೆ. ಕುದುರೆ ವ್ಯಾಪಾರದ ಮೂಲಕ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರಕ್ಕೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಕೆ.ಸಿ ವೇಣುಗೋಪಾಲ್ ಹೇಳಿದರು.

Advertisement

ಬುಧವಾರ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭ್ರಷ್ಟ ಸರಕಾರವಾಗಿದ್ದು, ಅದಲ್ಲೂ ಬೊಮ್ಮಾಯಿ ಅವಧಿ ಹಿಂದಿನ ಭ್ರಷ್ಟಾಚಾರದ ದಾಖಲೆಯನ್ನೇ ಮುರಿದಿದೆ. ಶೇ.40ರಷ್ಟು ಕಮಿಷನ್ ವ್ಯವಹಾರದಲ್ಲಿ ತೊಡಗಿಸಿಕೊಳ್ಳುವ ಮೂಲಕ ನೀಡಿದ ಭರಸವೆಗಳಲ್ಲಿ ಶೇ.75ರಷ್ಟನ್ನೂ ಈಡೇರಿಸಿಲ್ಲ ಎಂದರು.

ಕಾಂಗ್ರೆಸ್ ಈಗಾಗಲೇ 4 ಗ್ಯಾರೆಂಟಿ ಕಾರ್ಡ್‌ಗಳೊಂದಿಗೆ ಜನರ ಬಳಿಗೆ ಹೋಗುತ್ತಿದ್ದು, ಭ್ರಷ್ಟಾಚಾರ ರಹಿತ, ಅಭಿವೃದ್ಧಿ ಪರವಾದ ಮತ್ತು ಸಮಗ್ರ ದೃಷ್ಟಿಕೋನ ಹೊಂದಿರುವ ಕಾಂಗ್ರೆಸ್ ಸರಕಾರ ರಚಿಸುವ ಭರವಸೆಯನ್ನು ನೀಡುತ್ತಿದ್ದೇವೆ. ಇಂತಹ ಪಾರದರ್ಶಕ ಸರಕಾರ ರಚಿಸುವ ನಿಟ್ಟಿನಲ್ಲಿ ಪ್ರಣಾಳಿಕೆಯನ್ನೂ ಸಿದ್ಧಪಡಿಸುತ್ತಿದ್ದು, ಶೀಘ್ರ ಬಿಡುಗಡೆ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next