Advertisement

22 ಕೈ ಶಾಸಕರು ನನ್ನ ಸಂಪರ್ಕದಲ್ಲಿ: ರಮೇಶ್‌

05:02 AM May 30, 2020 | Team Udayavani |

ಚಾಮರಾಜನಗರ: ಬಿಜೆಪಿ ಹೈಕಮಾಂಡ್‌ ಅನುಮತಿ ನೀಡಿದರೆ ಐದು ಮಂದಿ ಕಾಂಗ್ರೆಸ್‌ ಶಾಸಕರ ರಾಜೀನಾಮೆ ಕೊಡಿಸುವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೊಸ ಬಾಂಬ್‌ ಸಿಡಿಸಿದ್ದಾರೆ.

Advertisement

ಕೊಳ್ಳೇಗಾಲದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, 22 ಮಂದಿ ಕಾಂಗ್ರೆಸ್‌ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ.  ಟ್ರಯಲ್‌ ಬೇಸ್‌ ಆಗಿ ಐದು ಮಂದಿ ಶಾಸಕರ ರಾಜೀನಾಮೆ ಕೊಡಿಸಲು ಸಿದ್ದ ಎಂದರು. ಬಿಜೆಪಿ ಹೈಕಮಾಂಡ್‌ ಅನುಮತಿ ನೀಡಿದರೆ ಒಂದು  ವಾರದೊಳಗೆ ಅವರ ರಾಜೀನಾಮೆ ಕೊಡಿಸಿ ಬಿಜೆಪಿಗೆ ಸೇರ್ಪಡೆಗೊಳಿಸುತ್ತೇನೆ.

ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರ ಇದ್ದೇನೆ. ಬಿಜೆಪಿ ಸರ್ಕಾರ ಸೇಫ್ ಆಗಿದೆ. ಉಮೇಶ್‌ ಕತ್ತಿ ನನ್ನ ಸ್ನೇಹಿತರು, ಫೋನ್‌ ಮಾಡಿ ಚರ್ಚಿಸಿದರು.  ಚರ್ಚೆ ಮಾಡುವುದು ಭಿನ್ನಮತ ಅಲ್ಲ. ಅವರಿಗೆ ಯಾವ ರೀತಿ ಅಸಮಾಧಾನ ಆಗಿದೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next