Advertisement

22ರಿಂದ ನಗರ  ಜಿಲ್ಲಾ ಸಾಹಿತ್ಯ ಸಮ್ಮೇಳನ

11:51 AM Apr 15, 2017 | Team Udayavani |

ಬೆಂಗಳೂರು: ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ 11ನೇ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಏ.22 ಮತ್ತು 23ರಂದು ವಿಜಯನಗರದ ಬಿಎಂಟಿಸಿ ಬಸ್‌ ನಿಲ್ದಾಣದ ಮುಂಭಾಗದ ಮೆಟ್ರೋ ಆವರಣದಲ್ಲಿ ನಡೆಯಲಿದೆ.

Advertisement

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ , ಎರಡು ದಿನ ನಡೆಯಲಿರುವ ನಗರ ಜಿಲ್ಲೆ 11ನೇ ಕನ್ನಡ ಸಾಹಿತ್ಯ ಸಮ್ಮೇಳನಾ­ಧ್ಯಕ್ಷರಾಗಿ ಚುಟುಕು ಕವಿ ಜರಗನಹಳ್ಳಿ ಶಿವಶಂಕರ್‌ ಆಯ್ಕೆಯಾಗಿದ್ದಾರೆ. ಏ.22ರಂದು ಬೆಳಗ್ಗೆ 8ಕ್ಕೆ ಸಮ್ಮೇಳನಾ­ಧ್ಯಕ್ಷರ ಮೆರವಣಿಗೆ ವಿಜಯನಗರದ ಪ್ರಮುಖ ರಸ್ತೆಗಳ ಮೂಲಕ ಸಮ್ಮೇಳನ ಸಭಾಂಗಣದ ವರೆಗೆ ನಡೆಯಲಿದೆ.

ವಸತಿ ಸಚಿವ ಎಂ.ಕೃಷ್ಣಪ್ಪ ಮೆರವಣಿಗೆ ಉದ್ಘಾಟಿಸಲಿದ್ದಾರೆ. ವೇದಿಕೆ ಕಾರ್ಯಕ್ರಮಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಉದ್ಘಾಟಿಸುವರು ಎಂದು ಹೇಳಿದರು. ಸಮ್ಮೇಳನದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕೃತಿಗಳನ್ನು ಕೇಂದ್ರ ಸಚಿವ ಅನಂತಕುಮಾರ್‌ ಲೋಕಾರ್ಪಣೆ ಮಾಡುವರು. ಎಸ್‌.ಜಿ.ಮಾಲತಿ ಶೆಟ್ಟಿ ಅವರ “ಮಹಾಸಂಗಮ’ ಕೃತಿ, ಸ್ಮರಣ ಸಂಚಿಕೆ ಬಿಡುಗಡೆಯಾಗಲಿವೆ.

ಕನ್ನಡ ವಿಜ್ಞಾನ ಮತ್ತು ಮಾಧ್ಯಮ ಕುರಿತ ಮೂರು ವಿಚಾರಗೋಷ್ಠಿಗಳು, ಯುವ ಕವಿಗಳು ಮತ್ತು ಹಿರಿಯ ಕವಿಗಳಿಗಾಗಿ ಎರಡು ಕವಿಗೋಷ್ಠಿಗಳು ನಡೆಯಲಿವೆ. ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ವಿವಿಧ ಕ್ಷೇತ್ರಗಳಲ್ಲಿ ಆದರ್ಶಪ್ರಾಯ ಕೆಲಸ ಮಾಡಿರುವ 110 ಸಾಧಕರಿಗೆ ಸನ್ಮಾನ, ಬಹಿರಂಗ ಅಧಿವೇಶನವಿದ್ದು, ಪ್ರತಿ ದಿನ ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. 

ಸಮ್ಮೇಳನಕ್ಕೆ ಹಿರಿಯ, ಕಿರಿಯ ಸಾಹಿತಿಗಳು, ಕವಿಗಳು, ಕನ್ನಡ ಪರಸಂಘಟನೆಗಳು, ಕಲಾವಿದರು, ಹೋರಾಟಗಾರರು, ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಲಿದ್ದಾರೆ. ಪರಭಾಷಿಗರಿಗೆ ಕನ್ನಡದ ಕುರಿತು ಜಾಗೃತಿ ಮೂಡಿಸುವುದರ ಜತೆಗೆ, ಕನ್ನಡ ನಾಡು, ನುಡಿ, ಸಂಸ್ಕೃತಿಯ ಪ್ರಾತಿನಿಧಿಕ ಸಂಸ್ಥೆಯಾಗಿ ಕಸಾಪ ಈ ಸಮ್ಮೇಳನ ಆಯೋಜಿಸಿದೆ.

Advertisement

ಕನ್ನಡ ಉಳಿವು, ಅಭಿವೃದ್ಧಿಗೆ ಪೂರಕವಾಗಿ ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶ್ರಮಿಸುತ್ತಿದ್ದು, ಈ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎಂ.ತಿಮ್ಮಯ್ಯ, ಸಿದ್ದಯ್ಯ, ನಾ.ಶ್ರೀಧರ್‌, ಪಾಲನೇತ್ರ ಸೇದಂತೆ ಇತರರು ಉಪಸ್ಥಿತರಿದ್ದರು. 

ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ
ಬೆಂಗಳೂರು ಇಂಡಿಯನ್‌ ಎಪಿಲೆಪ್ಸಿ ಅಸೋಸಿಯೇಷನ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಮಾಜಿ ನಿರ್ದೇಶಕ ಡಾ.ಜಿ.ಟಿ. ಸುಭಾಷ್‌ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಸ್ಥೆಯ ಸಭೆಯಲ್ಲಿ ಸುಭಾಷ್‌ ಅವರನ್ನು ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಯಿತು ಎಂದು ಖಜಾಂಚಿ ಡಾ.ಮುರಳೀಧರನ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next