Advertisement

Arrested: 22 ಮನೆ ಕಳ್ಳತನ ಕೇಸ್‌ ಆರೋಪಿ ಸೆರೆ

11:41 AM Oct 06, 2024 | Team Udayavani |

ಬೆಂಗಳೂರು: ರಾತ್ರಿ ವೇಳೆ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಬೀಗ ಮುರಿದು ಕಳವು ಮಾಡುತ್ತಿದ್ದ ಕಳ್ಳನನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ರಘುವನಹಳ್ಳಿ ಬಾಲಾಜಿ ಲೇಔಟ್‌ ನಿವಾಸಿ ರಘು ಅಲಿಯಾಸ್‌ ಪೆಪ್ಸಿ (24) ಬಂಧಿತ. ಆರೋಪಿಯಿಂದ 8.5 ಲಕ್ಷ ರೂ. ಮೌಲ್ಯದ 120 ಗ್ರಾಂ ಚಿನ್ನಾಭರಣ, ಬೈಕ್‌ ಜಪ್ತಿ ಮಾಡಲಾಗಿದೆ. ಸೆ.7ರಂದು ಮಂಗನಹಳ್ಳಿ ಖಾಲಿದ್‌ ನಯಾಜ್‌ ಖಾನ್‌ ಎಂಬವರ ಮನೆಯಲ್ಲಿ ಕಳ್ಳತನವಾಗಿತ್ತು.

ಆರೋಪಿ ರಘು ಬಗ್ಗೆ ಮಾಹಿತಿ ಸಂಗ್ರಹಿಸಿ ರಘುವನಹಳ್ಳಿ ಬಾಲಾಜಿ ಲೇಔಟ್‌ನಲ್ಲಿ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಸ್ನೇಹಿತರಾದ ಮಿಥುನ್‌, ದೀಪಕ್‌ ಹಾಗೂ ಜೈ ದೀಪು ಎಂಬುವರ‌ ಜತೆ ಸೇರಿಕೊಂಡು ಮನೆಗಳವು ಮಾಡುತ್ತಿದ್ದಾಗಿ ಹೇಳಿಕೆ ನೀಡಿದ್ದಾನೆ. ಸದ್ಯ ಈ ಮೂವರು ಆರೋಪಿಗಳನ್ನು ರಾಜರಾಜೇಶ್ವರಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ರಘು ವೃತ್ತಿಪರ ಕಳ್ಳನಾಗಿದ್ದು, ಇತ್ತೀಚೆಗಷ್ಟೇ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಈತನ ವಿರುದ್ಧ ಈ ಹಿಂದೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ 22 ಕನ್ನ ಕಳವು ಪ್ರಕರಣ ದಾಖಲಾಗಿವೆ.  ಜ್ಞಾನಭಾರತಿ ಠಾಣೆಯಲ್ಲಿ 3, ತಮಿಳುನಾಡಿನಲ್ಲಿ 2 ಕನ್ನ ಕಳವು, ಆಂಧ್ರಪ್ರದೇಶದಲ್ಲಿ 2 ಕನ್ನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next