Advertisement

Agri: ಹಿಂಗಾರು ಬೆಳೆಗಾಗಿ ರಸಗೊಬ್ಬರಕ್ಕೆ 22,303 ಕೋಟಿ ಸಬ್ಸಿಡಿಗೆ ಒಪ್ಪಿಗೆ: ಅನುರಾಗ್‌

11:35 PM Oct 25, 2023 | Team Udayavani |

ಹೊಸದಿಲ್ಲಿ: ದೇಶದಲ್ಲಿ ಹಿಂಗಾರು ಬೆಳೆಗಳ ಅವಧಿಗೆ ಅನುಕೂಲ ವಾಗುವಂತೆ ಕೇಂದ್ರ ಸರಕಾರ 22,303 ಕೋಟಿ ರೂ. ಮೊತ್ತವನ್ನು ರಸಗೊಬ್ಬರಕ್ಕೆ ಸಹಾಯ ಧನವಾಗಿ ನೀಡಲು ತೀರ್ಮಾನಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಹೇಳಿದ್ದಾರೆ.

Advertisement

ಜಗತ್ತಿನ ಹಲವು ರಾಷ್ಟ್ರಗಳಲ್ಲಿ ರಸಗೊಬ್ಬರಗಳ ಬೆಲೆ ಹೆಚ್ಚಾಗಿಯೇ ಇದೆ ಎಂದು ಹೇಳಿದ ಠಾಕೂರ್‌, ದೇಶದ ರೈತರ ಹಿತದೃಷ್ಟಿಯನ್ನು ಮೋದಿ ಸರಕಾರ ಗಮನದಲ್ಲಿ ಇರಿಸಿದೆ ಎಂದರು. ಇದಲ್ಲದೆ 50 ಕೆ.ಜಿ.ಯ ಡಿಎಪಿ ರಸಗೊಬ್ಬರ ಪ್ರತೀ ಬ್ಯಾಗ್‌ಗೆ 1,350 ರೂ.ಗಳಂತೆಯೇ ಸಿಗಲಿದೆ ಎಂದು ಠಾಕೂರ್‌ ಹೇಳಿದ್ದಾರೆ. ಪಾಸ್ಪೇಟ್‌ ರಸಗೊ ಬ್ಬರಗಳಿಗೆ ಅ.1ರಿಂದ ಮಾ.31ರ ವರೆಗೆ ಇರುವ ಹಿಂಗಾರು ಬೆಳೆ ಅವಧಿ (ರಬಿ)ಗಾಗಿ 22,303 ಕೋಟಿ ರೂ. ಸಹಯಾಧನ ನೀಡಲು ತೀರ್ಮಾನಿಸಿದೆ. ಇದಲ್ಲದೆ ಎನ್‌ಪಿಕೆಗೆ ಹಳೆಯ ದರ 1,470 ರೂ., ಸಿಂಗಲ್‌ ಸೂಪರ್‌ ಪಾಸೆ#àಟ್‌ ರಸಗೊಬ್ಬರ ಚೀಲಕ್ಕೆ 500 ರೂ., ಪೊಟ್ಯಾಷ್‌ ರಸಗೊಬ್ಬರ ಚೀಲಕ್ಕೆ 1,700 ರೂ.ಗಳ ಬದಲು 1,655 ರೂ.ಗಳಿಗೆ ಸಿಗಲಿದೆ ಎಂದು ಕೇಂದ್ರ ಸಚಿವ ಠಾಕೂರ್‌ ಹೇಳಿದ್ದಾರೆ. ಮೇಯಲ್ಲಿ ನಡೆದಿದ್ದ ಮುಂಗಾರು ಅವಧಿಯ ಬೆಳೆಗಳಿಗಾಗಿ 38 ಸಾವಿರ ಕೋಟಿ ರೂ. ಮೌಲ್ಯದ ರಸಗೊಬ್ಬರ ಸಹಾಯಧನ ನೀಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next