Advertisement

ಕೋವಿಡ್ ಕಂಟಕ: ರಾಜ್ಯದಲ್ಲಿಂದು 2313 ಜನರಿಗೆ ಸೋಂಕು ದೃಢ, 1004 ಮಂದಿ ಗುಣಮುಖ

06:31 PM Jul 10, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕಂಟಕ ಮುಂದುವರಿದಿದೆ. ಶುಕ್ರವಾರ ರಾಜ್ಯದಲ್ಲಿ 2313 ಜನರಿಗೆ ಕೋವಿಡ್ 19 ಸೋಕು ದೃಢವಾಗಿದ್ದು, 1004 ಮಂದಿ ಗುಣಮುಖರಾಗಿದ್ದಾರೆ.

Advertisement

ಇಂದಿನ ಹೊಸ 2313 ಸೋಂಕು ಪ್ರಕರಣಗಳ ಕಾರಣದಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 33,418ಕ್ಕೆ ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 1447 ಮಂದಿಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 134 ಸೋಂಕು ಪ್ರಕರಣಗಳೂ, ಉಡುಪಿ ಜಿಲ್ಲೆಯಲ್ಲಿ 34, ಚಾಮರಾಜನಗರದಲ್ಲಿ 13 ಮಂದಿಗೆ ಸೋಂಕು ತಾಗಿರುವುದು ದೃಢವಾಗಿದೆ.

ರಾಜ್ಯದಲ್ಲಿ ಇಂದು 57 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ರಾಜ್ಯದ ಕೋವಿಡ್-19 ಸೋಂಕಿತರ ಸಾವಿನ ಸಂಖ್ಯೆ 543ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next