Advertisement
ವಿಪರ್ಯಾಸವೆಂದರೆ ಹಾಳಾಗಿರ್ಲ 24 ಶುದ್ಧ ಕುಡಿಯುವ ನೀರಿನ ಘಟಕವನ್ನು ಸರ್ಕಾರದ ಅಧಿಕೃತ ಸಂಸ್ಥೆಯಾದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್ಐಡಿಎಲ್)ವು ನಿರ್ವಹಣೆ ಮಾಡುತ್ತಿದೆ. ತಾಲೂಕಿನಲ್ಲಿ ವಿವಿಧ ಗ್ರಾಮಗಳಿಂದ 36 ಶುದ್ಧ ಕುಡಿಯುವ ನೀರಿನ ಘಟಕ ಈ ವರೆಗೆ ಸ್ಥಾಪಿಸಿದೆ. ಕೆಆರ್ಐಡಿಎಲ್ ಅಧಿಕಾರಿಗಳು ಮುಂದೆ ನಿಂತು ಕಟ್ಟಡ ನಿರ್ಮಾಣ, ಘಟಕಕ್ಕೆ ನೀರು ಶುದ್ಧೀಕರಣ ಯಂತ್ರ ಅಳವಡಿಕೆ ಸೇರಿದಂತೆ ಎಲ್ಲಾ ಕಾಮಗಾರಿಯನ್ನು ಜವಾಬ್ದಾರಿಯಿಂದ ಮಾಡಿದ್ದಾರೆ ಆದರೂ ಏಕೆ 24 ಶುದ್ಧ ನೀರಿನ ಘಟಕಗಳು ಹಾಳಾಗಿವೆ ಎನ್ನುವುದು ಜನರ ಪ್ರಶ್ನೆಯಾಗಿದೆ.
Related Articles
Advertisement
ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಲವೇ ದಿವಸಗಳಲ್ಲಿ ಹಾಳಾಗುತ್ತಿರುವ ಬಗ್ಗೆ ಬಗ್ಗೆ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಗಮನಕ್ಕೆ ತರುತ್ತಿದ್ದಾರೆ. ಶುದ್ಧ ನೀರಿನ ಘಟಕದಿಂದ ಜನತೆಗೆ ಉಪಯೋಗಾಗುತ್ತಿಲ್ಲ. ಸರ್ಕಾರದ ಅನುದಾನ ಸಮರ್ಪಕವಾಗಿ ಅನುಷ್ಠಾನವಾಗಬೇಕಿದೆ. ಇವುಗಳ ಉಸ್ತುವಾರಿ ನೋಡಿಕೊಳ್ಳುವ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಅಧಿಕಾರಿಗಳು ಎಚ್ಚೆತ್ತುಕೊಂಡು ನಿರ್ವಹಣೆ ಮಾಡುವ ಏಜೆನ್ಸಿಗೆ ಸೂಕ್ತ ನಿರ್ದೇಶಕ ನೀಡಿ ತ್ವರಿತವಾಗಿ ಕಾರ್ಯಾರಂಭ ಮಡಬೇಕೆಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು ಪ್ರಯೋಜನವಾಗಿಲ್ಲ.
ಅಶುದ್ಧ, ಫ್ಲೋರೈಡ್ ನೀರೇಗತಿ: 24 ಶುದ್ಧ ನೀರಿನ ಘಟಕ ಸ್ಥಗಿತವಾಗಿರುವುದರಿಂದ ಸಾವಿರಾರು ಮಂದಿ ನಿತ್ಯವೂ ಅಶುದ್ಧ ಹಾಗೂ ಫ್ಲೋರೈಡ್ ನೀರು ಕುಡಿಯುತ್ತಿದ್ದಾರೆ. 24 ಘಟಕ ಕೇವಲ 24 ಗ್ರಾಮಕ್ಕೆ ಸೀಮಿತವಾಗಿರುವುದಿಲ್ಲ. ಎರಡರಿಂದ ಮೂರು ಗ್ರಾಮಸ್ಥರು ಘಟಕದಲ್ಲಿ ನೀರು ಪಡೆಯುತ್ತಾರೆ. ಇದರ ಅನುಸಾರ ನೂರಕ್ಕೂ ಹೆಚ್ಚು ಗ್ರಾಮದಿಂದ ಸಾವಿರಾರು ಮಂದಿ ಸಾರ್ವಜನಿಕರು ನಿತ್ಯವೂ ಅಶುದ್ಧ ಕುಡಿಯುವ ನೀರು ಸೇವೆನ ಮಾಡುತ್ತಿರುವುದರಿಂದ ಸಾಂಕ್ರಾಮಿಕ ರೋಗದ ಭೀತಿ ಅವರಲ್ಲಿ ಮನೆ ಮಾಡಿದೆ.
ತಾಲೂಕಿನಲ್ಲಿ ಮೂವರು ಶಾಸಕರಿದ್ದಾರೆ: ತಾಲೂಕಿನ ದಂಡಿಗನಹಳ್ಳಿ ಹೋಬಳಿ ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರದಲ್ಲಿ ಇರುವುದರಿಂದ ಅಲ್ಲಿನ ಶಾಸಕ ಎಚ್.ಡಿ.ರೇವಣ್ಣ, ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರದ ಸಿ.ಎನ್.ಬಾಲಕೃಷ್ಣ ಹಾಗೂ ತಾಲೂಕಿನ ಮಗನಾಗಿರುವ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೀಗೆ ತಾಲೂಕಿಗೆ ಒಟ್ಟು ಮೂರು ಮಂದಿ ಶಾಸಕರಿದ್ದರೂ ಗ್ರಾಮೀಣ ಭಾಗದ ಜನತೆ ಫ್ಲೋರೈಡ್ ನೀರು ಕುಡಿಯುವುದ ತಪ್ಪಿಸಲಾಗುತ್ತಿಲ್ಲ.
ಕೆಆರ್ಐಡಿಎಲ್ ವತಿಯಿಂದ ನಿರ್ಮಾಣ ಮಾಡಿರುವ ನೀರಿನ ಘಟಕ ನಿರ್ವಹಣೆ ಇಲ್ಲದೇ ಸ್ಥಗಿತವಾಗಿದೆ. ಅಧಿಕಾರಿಗೆ ಈಗಾಗಲೆ ಪತ್ರ ಬರೆಯಲಾಗಿದೆ. ನಿರ್ವಹಣೆ ಮಾಡಲು ಸಾಧ್ಯವಾಗದಿದ್ದರೆ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಗೆ ಹಸ್ತಾಂತರ ಮಾಡುವಂತೆ ಪತ್ರ ಬರೆದರೂ ಯಾವುದೇ ಪ್ರಯೋಜವಾಗಿಲ್ಲ.-ನಳಿನಿ, ಎಇಇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕುಡಿಯುವ ನೀರಿನ ಘಟಕ ಕೆಟ್ಟು ತಿಂಗಳು ಸಮೀಪಿಸುತ್ತಿದ್ದರೂ ಇದರ ದುರಸ್ತಿ ಮಾಡಲು ಮುಂದಾಗುತ್ತಿಲ್ಲ. ಈಗಾಗಲೇ ಎರಡು ಬಾರಿ ಗ್ರಾಮ ಪಂಚಾಯಿತಿ ಗಮನಕ್ಕೆ ತರಲಾಗಿದೆ. ಆದರೂ ಯಾವುದೇ ಪ್ರಯೋಜನವಿಲ್ಲ, ಶುದ್ಧ ಕುಡಿಯುವ ನೀರು ಇಲ್ಲದೇ ಇರುವುದರಿಂದ ನಿತ್ಯವೂ ಮನೆಯಲ್ಲಿ ಕೊಳವೆ ಬಾವಿ ನೀರು ಕುಡಿಯುತ್ತಿದ್ದೇವೆ.
-ಸುರೇಶ, ಬಳದರೆ ಗ್ರಾಮ * ಶಾಮಸುಂದರ್ ಕೆ. ಅಣ್ಣೇನಹಳ್ಳಿ