Advertisement

ಕೋಲ್ಕತ್ತಾದಲ್ಲಿ ವೈದ್ಯರ ಅತ್ಯಾಚಾರ, ಕೊಲೆ‌ ಖಂಡಿಸಿ ಆ.17 ರಿಂದ 24 ತಾಸು ಒಪಿಡಿ ಸೇವೆ ಬಂದ್

02:13 PM Aug 16, 2024 | Team Udayavani |

ಪುತ್ತೂರು: ಕೋಲ್ಕತ್ತಾದ ಆರ್ ಜಿ ಕಾರ್ ಮೆಡಿಕಲ್ ‌ಕಾಲೇಜಿನಲ್ಲಿ ಕರ್ತವ್ಯನಿರತ ವೈದ್ಯೆಯನ್ನು ಅತ್ಯಾಚಾರ ಎಸಗಿ ಅಮಾನುಷ ರೀತಿಯಲ್ಲಿ ಹತ್ಯೆಗೈದ ಘಟನೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಆ.17 ಮತ್ತು18 ರಂದು ಕರೆ ನೀಡಿರುವ ಪ್ರತಿಭಟನೆಗೆ ಪುತ್ತೂರು ಶಾಖೆಯು ಬೆಂಬಲ ನೀಡಿದೆ.

Advertisement

ಆ.17 ರಂದು‌ ಬೆಳಗ್ಗೆ 6 ರಿಂದ ಆ.18 ಬೆಳಗ್ಗೆ 6 ಗಂಟೆಯ ತನಕ‌ ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ತುರ್ತು ಹಾಗೂ ಗಂಭೀರವಲ್ಲದ ಸಾಮಾನ್ಯ ವೈದ್ಯಕೀಯ ಸೇವೆಗಳ ವಿಭಾಗವನ್ನು ಮುಚ್ಚಲಾಗುವುದು.

ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲಾ ವೈದ್ಯಕೀಯ ಸಂಸ್ಥೆಗಳು ಮುಚ್ಚಲಿವೆ. ಆಸ್ಪತ್ರೆಗಳು, ಖಾಸಗಿ ಚಿಕಿತ್ಸಾಲಯಗಳು ಪೂರ್ಣ ಬೆಂಬಲ ನೀಡಲಿದೆ ಎಂದು ಐಎಂಐ ಪುತ್ತೂರು ಶಾಖೆಯ ಅಧ್ಯಕ್ಷ ಡಾ.ನರಸಿಂಹ ಶರ್ಮಾ ಕಾನಾವು, ಕಾರ್ಯದರ್ಶಿ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಆ.16ರ ಶುಕ್ರವಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next