Advertisement

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

01:46 PM Sep 25, 2023 | Team Udayavani |

ಲಕ್ನೋ: ಬಿಜೆಪಿ ಶಾಸಕರ ಅಧಿಕೃತ ನಿವಾಸದಲ್ಲಿ ಯುವಕನೊಬ್ಬ ನೇಣುಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ (ಸೆ.24 ರಂದು) ರಾತ್ರಿ ನಗರದ ಹಜರತ್‌ಗಂಜ್ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

Advertisement

ಬಿಜೆಪಿಯ ಶಾಸಕ ಯೋಗೇಶ್ ಶುಕ್ಲಾ ಅವರ ಅಧಿಕೃತ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ ಮೂಲದ ಶ್ರೇಷ್ಠ ತಿವಾರಿ (24) ಆತ್ಮಹತ್ಯೆ ಮಾಡಿಕೊಂಡ ಯುವಕ.

ಶ್ರೇಷ್ಠ ತಿವಾರಿ ಲಕ್ನೋದ ಬಕ್ಷಿ ಕಾ ತಲಾಬ್ (BKT) ಅಸೆಂಬ್ಲಿ ಕ್ಷೇತ್ರದ ಶಾಸಕ ಯೋಗೇಶ್ ಶುಕ್ಲಾ ಅವರಿಗೆ ಸಂಬಂಧಿಸಿದ ಮಾಧ್ಯಮ ತಂಡದ ಸದಸ್ಯರಾಗಿದ್ದರು. ಶುಕ್ಲಾ ಅವರ ಹಜರತ್‌ಗಂಜ್ ನಿವಾಸದಲ್ಲಿ ತಿವಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕೌಟುಂಬಿಕ ಕಲಹದಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ತಿವಾರಿಯ ಪ್ರಿಯತಮೆ ವಿರುದ್ಧ ಕಿರುಕುಳ ಹಾಗೂ ನಿಂದನೆ ಆರೋಪ ಮಾಡಿ ಮೃತರ ಕುಟುಂಬ ಪೊಲೀಸರಿಗೆ ದೂರು ನೀಡಿದೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ದೂರು ದಾಖಲಿಸಿಕೊಂಡು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next