Advertisement

ಪ್ರತಿ ಎಕರೆಗೆ 25 ಲಕ್ಷ ರೂ. ಪರಿಹಾರ ನೀಡಲು ಆಗ್ರಹ

03:15 PM Dec 12, 2021 | Team Udayavani |

ಲಿಂಗಸುಗೂರು: ಗದಗ-ವಾಡಿ ರೈಲ್ವೆ ಯೋಜನೆಗಾಗಿ ಭೂಮಿ ಕಳೆದಕೊಳ್ಳುವ ರೈತರಿಗೆ ಎಕರೆಗೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಭಾರತೀಯ ಕಿಸಾನ್‌ ಸಂಘದ ಜಿಲ್ಲಾಧ್ಯಕ್ಷ ಕೆ.ರಂಗನಾಥ ಪಾಟೀಲ್‌ ಆಗ್ರಹಿಸಿದ್ದಾರೆ.

Advertisement

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ-ವಾಡಿ ರೈಲ್ವೆ ಯೋಜನೆಗಾಗಿ ತಾಲೂಕಿನ 23 ಹಳ್ಳಿಗಳ ಒಟ್ಟು 1085 ಎಕರೆ ಜಮೀನು ಭೂಸ್ವಾ ಧೀನ ಪ್ರಕ್ರಿಯೆಯಲ್ಲಿದೆ. ಈ ಯೋಜನೆಗೆ ಭೂಮಿ ಕಳೆದುಕೊಂಡು ರೈತರಿಗೆ ಎಕರೆಗೆ 8-13 ಲಕ್ಷ ರೂ. ನಿಗದಿ ಮಾಡಲಾಗಿರುತ್ತಿದೆ. ಆದರೆ, ಇದು ಅವೈಜ್ಞಾನಿಕ ದರವಾಗಿದೆ. ಇದರಿಂದ ರೈತರಿಗೆ ಅನ್ಯಾಯವಾಗಿರುತ್ತಿದೆ. ಕನಿಷ್ಠವೆಂದರೂ ಎಕರೆಗೆ 25 ಲಕ್ಷ ರೂ. ಪರಿಹಾರ ನೀಡಬೇಕು. ಸಂಪೂರ್ಣ ಭೂಮಿ ಕಳೆದುಕೊಂಡ ರೈತರ ಕುಟುಂಬದಲ್ಲಿ ಒಬ್ಬರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ದಳವಾಯಿ, ತಾಲೂಕು ಅಧ್ಯಕ್ಷ ಗಂಗನಗೌಡ ಪಾಟೀಲ್‌ ಹಾಗೂ ಇನ್ನಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next