Advertisement

Chikkamagaluru ರೈಲು ನಿಲ್ದಾಣ ಅಭಿವೃದ್ಧಿಗೆ 26 ಕೋಟಿ ರೂ. ಬಿಡುಗಡೆ: ಸಚಿವ ವಿ.ಸೋಮಣ್ಣ

04:42 PM Jul 18, 2024 | Team Udayavani |

ಚಿಕ್ಕಮಗಳೂರು: ರೈಲ್ವೇ ಇಲಾಖೆಯಲ್ಲಿ 11 ಸಾವಿರ ಕೋಟಿ ರೂ. ಕಾಮಗಾರಿ ಪೆಂಡಿಂಗ್ ಇದ್ದು, ಆ ಎಲ್ಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ರೈಲ್ವೇ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

Advertisement

ಚಿಕ್ಕಮಗಳೂರು ನಗರದ ರೈಲ್ವೇ ನಿಲ್ದಾಣ ಹಾಗೂ ಹಾದಿಹಳ್ಳಿ ರೈಲು ನಿಲ್ದಾಣ ಪರಿಶೀಲಿಸಿ ಸುದ್ದಿಗಾರರ ಜತೆ ಮಾತನಾಡಿದರು. ಕೇಂದ್ರ ಸರ್ಕಾರ ರಾಜ್ಯದ 59 ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಮುಂದಾಗಿದ್ದು, 54 ನಿಲ್ದಾಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಚಿಕ್ಕಮಗಳೂರು ರೈಲು ನಿಲ್ದಾಣವೂ ಒಂದಾಗಿದೆ. 26 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.

ರೈಲ್ವೇ ನಿಲ್ದಾಣ ವಿಸ್ತರಣೆ, ಮೂಲಭೂತ ಸೌಕರ್ಯಗಳ ಜತೆ, ಜಿಲ್ಲಾ ಕೇಂದ್ರದಲ್ಲಿ ರೈಲು ನಿಲ್ದಾಣ ಯಾವ ರೀತಿ ಆಧುನೀಕರಣ ಮಾಡಬೇಕು. ಆ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ವೈಟಿಂಗ್ ರೂಮ್, ಪುರುಷ ಮತ್ತು ಮಹಿಳಾ ಶೌಚಾಲಯ, ಸಣ್ಣ ರೆಸ್ಟೋರೆಂಟ್, ಟಿಕೆಟ್ ಕೌಂಟರ್ ಸೇರಿದಂತೆ ಎಲ್ಲಾ ತರಹದ ಸೌಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

ಮಂಗಳೂರು ರೈಲ್ವೇ ನಿಲ್ದಾಣದ ಪರಿಶೀಲನೆ ನಡೆಸಿದ್ದೇನೆ. ಈ ನಿಲ್ದಾಣವನ್ನು 321 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೈಲ್ವೇ ನಿಲ್ದಾಣವಾಗಿ ನಿರ್ಮಾಣ ಮಾಡಲು ನಿರ್ಧರಿಸಿದ್ದು ಜನವರಿಯಿಂದ ಕೆಲಸ ಆರಂಭವಾಗಲಿದೆ. ಎರಡರಿಂದ ಮೂರು ವರ್ಷದಲ್ಲಿ ಕಾಮಗಾರಿ ಮುಕ್ತಾಯವಾಗಲಿದೆ ಎಂದರು.

Advertisement

ಚಿಕ್ಕಮಗಳೂರು ರೈಲ್ವೇ ನಿಲ್ದಾಣ ಕಾಮಗಾರಿ ಡಿಸೆಂಬರ್ 25 ರೊಳಗೆ ಕಾಮಗಾರಿ ಮುಕ್ತಾಯ ಗೊಳ್ಳಲಿದೆ. ಚಿಕ್ಕಮಗಳೂರು, ಬೇಲೂರು ಅಲ್ಲಿಂದ ಅರೇಹಳ್ಳಿ, ಹಾಸನ ರೈಲ್ವೇ ಮಾರ್ಗಕ್ಕೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಜಾಗ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಹಾಸನ ಜಿಲ್ಲೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಬಾಕಿಯಿದ್ದು ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರವೇ ಭೂ ಸ್ವಾಧೀನ ಪ್ರಕ್ರಿಯೆ ನಡೆಯಲಿದೆ ಎಂದರು.

ಜನಸಾಮಾನ್ಯರಿಗೆ ಅನುಕೂಲವಾಗಬೇಕು ಎನ್ನುವುದು ನಮ್ಮ‌ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ರೈಲ್ವೇ ಸೇವೆಯನ್ನು ತಾಲೂಕು ಕೇಂದ್ರಗಳಿಗೂ ವಿಸ್ತರಿಸುವ ನಿಟ್ಟಿನಲ್ಲಿ ಕಾರ್ಯೋನುಕರಾಗಿದ್ದೇವೆ ಎಂದ ಅವರು, ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಇಲ್ಲಿ ರೈಲ್ವೇ ನಿಲ್ದಾಣಕ್ಕೆ ಜಾಗ ನೀಡಿದ ರೈತರಿಗೆ ಓಡಾಡಲು ರಸ್ತೆ ಇಲ್ಲ ತೊಂದರೆಯಾಗಿದೆ ಎಂಬ ಸಮಸ್ಯೆಯನ್ನು ಗಮನಕ್ಕೆ ತಂದಿದ್ದು, ಸಮಸ್ಯೆ ನಿವಾರಣೆಗೆ ಮುಂದಾಗುವುದಾಗಿ ತಿಳಿಸಿದರು.

ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳ, ಕೊಲ್ಲೂರು ರೈಲ್ವೇ ಸಂಪರ್ಕ ಕಲ್ಪಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮನವಿ ಮಾಡಿದ್ದಾರೆ. ಎಲ್ಲೆಲ್ಲಿ ಅವಶ್ಯಕತೆ ಇದೆ. ಅನುಗುಣವಾಗಿ ರೈಲ್ವೆ ಸಂಪರ್ಕ ಕಲ್ಪಿಸಲಾಗುವುದು, ರಾಜ್ಯ ಸರ್ಕಾರ ನಮ್ಮೊಂದಿಗೆ ಕೈಜೋಡಿಸಬೇಕು ಎಂದ ಅವರು, ಜಾಗ ನೀಡಿದರೆ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದರು.

ಮೂರು ತಿಂಗಳಿಗೊಮ್ಮೆ ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರ ಜತೆಯಲ್ಲಿ ಡಿಆರ್ ಎಂಗಳು ಸಲಹಾ ಸಮಿತಿ ಮಾಡಲು ಸೂಚನೆ ನೀಡಿದ್ದು ಮುಂದಿನ ದಿನಗಳಲ್ಲಿ ಆದೇಶ ಮಾಡಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next