Advertisement

BJP ಜತೆಗೆ ಬಿಆರ್‌ಎಸ್‌ ರಹಸ್ಯ ಮೈತ್ರಿ: ಮಲ್ಲಿಕಾರ್ಜುನ ಖರ್ಗೆ ಆರೋಪ

11:42 PM Aug 26, 2023 | Team Udayavani |

ಹೈದರಾಬಾದ್‌: ತೆಲಂಗಾಣದಲ್ಲಿ ಆಡಳಿತದಲ್ಲಿ ಇರುವ ಭಾರತ ರಾಷ್ಟ್ರೀಯ ಸಮಿತಿ (ಬಿಆರ್‌ಎಸ್‌) ಬಿಜೆಪಿ ಜತೆಗೆ ರಹಸ್ಯ ಮೈತ್ರಿ ಮಾಡಿಕೊಂಡಿದೆ. ಈ ಕಾರಣ ಕ್ಕಾಗಿಯೇ ಕಾಂಗ್ರೆಸ್‌ ನೇತೃತ್ವದ ಐ.ಎನ್‌.ಡಿ.ಐ.ಎ. ಆಯೋಜಿಸಿರುವ ಪಕ್ಷಗಳ ಸಭೆಯಲ್ಲಿ ಅದು ಭಾಗ ವಹಿಸಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

Advertisement

ತೆಲಂಗಾಣದ ಚೆವೆಲ್ಲಾ ಎಂಬಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಅವರ ನೇತೃತ್ವದ ಪಕ್ಷ ಜಾತ್ಯತೀತ ಎಂದು ಕರೆಯಿಸಿಕೊಳ್ಳುತ್ತದೆ. ಆದರೆ ರಹಸ್ಯವಾಗಿ ಬಿಜೆಪಿ ಜತೆಗೆ ಸ್ನೇಹ ಮಾಡಿಕೊಂಡಿದೆ. ದೇಶದ ಏಕೀಕರಣದಲ್ಲಿ ಕಾಂಗ್ರೆಸ್‌ನ ಸಾಧನೆ ಅದ್ವಿತೀಯ. ಇದರ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಮ್ಮ ಪಕ್ಷದ ಕೊಡುಗೆ ಏನು ಎಂದು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next