Advertisement

Mumbai-Nagpur Expressway: ಬಸ್‌ ನಲ್ಲಿ ಹೊತ್ತಿಕೊಂಡ ಬೆಂಕಿ: 26 ಮಂದಿ ಸಜೀವ ದಹನ

09:02 AM Jul 01, 2023 | Team Udayavani |

ಮುಂಬಯಿ: ಖಾಸಗಿ ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ಮಂದಿ ಸಜೀವ ದಹನವಾಗಿರುವ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಶನಿವಾರ( ಜು. 1 ರಂದು) ನಡೆದಿದೆ.

Advertisement

ಮಹಾರಾಷ್ಟ್ರದ  ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

33 ಜನರು ಪ್ರಯಾಣಿಸುತ್ತಿದ್ದ ಬಸ್‌ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ಸಿನ ಟೈರ್ ಒಡೆದಿದೆ. ಆ ಬಳಿಕ ಬಸ್‌ ಪಲ್ಟಿಯಾಗಿ ಅದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ 26 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿ ತಿಳಿಸಿದೆ.

ಘಟನೆಯಲ್ಲಿ ಚಾಲಕ ಸುರಕ್ಷಿತವಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ.

ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

Advertisement

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಘಟನೆಯ ಕುರಿತು ಸಿಎಂ ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next