Advertisement

ವಿಜಯಪುರ: ಅಪರಿಚಿತ ವಾಹನ ಢಿಕ್ಕಿಯಾಗಿ ಸ್ಥಳದಲ್ಲೇ 29 ಕುರಿಗಳ ಸಾವು!

03:19 PM Sep 21, 2020 | keerthan |

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಜಿನ ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ತಿಹಾಳ ಕ್ರಾಸ್ ಬಳಿ ಅಪರಿಚಿತ ವಾಹನ ಢಿಕ್ಕಿ ಹೊಡೆದ ಕಾರಣಕ್ಕೆ 29 ಕುರಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.

Advertisement

ಭಾನುವಾರ ತಡರಾತ್ರಿ ಫತ್ತೇಪೂರ ಗ್ರಾಮದ ಹಳ್ಯಪ್ಪ ಎಂಬ ಕುರಿಗಾಯಿ ಇಬ್ಬರು ಮಕ್ಕಳೊಂದಿಗೆ ಕುರಿಗಳನ್ನು ಹೊಡೆದುಕೊಂಡು ಯರಗಲ್ಲ ಗ್ರಾಮದಿಂದ ಫತ್ತೇಪೂರ ಗ್ರಾಮಕ್ಕೆ ತೆರಳುತ್ತಿದ್ದರು. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಬಸ್ತಿಹಾಳ ಕ್ರಾಸ್ ಹತ್ತಿರ ವೇಗವಾಗಿ ಬರುತ್ತಿದ್ದ ಕೋಳಿಸಾಗಿಸುತ್ತಿದ್ದ ಅಪರಿಚಿತ ವಾಹನವೊಂದು ಕುರಿಗಳಿಗೆ ಢಿಕ್ಕಿ ಹೊಡೆದಿದೆ.

ವೇಗವಾಗಿ ಬರುತ್ತಿದ್ದ ಆ ವಾಹನ ತಮ್ಮ ಜೀವಕ್ಕೂ ಅಪಾಯ ತಂದೊಡ್ಡುವ ಸೂಚನೆ ಅರಿತ ಕುರಿಗಾರರು ತಮ್ಮ ಕುರಿಗಳನ್ನು ರಸ್ತೆ ಬದಿಗೆ ಸರಿಸಲು ಮುಂದಾಗುವ ಹಂತಲ್ಲೇ ವಾಹನ ಕುರಿಗಳ ಮೇಲೆ ಹಾಯ್ದಿತ್ತು. ಘಟನೆ ಬಳಿಕ ಚಾಲಕ ವಾಹನ‌ ನಿಲ್ಲಿಸದೇ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಹಳ್ಳದಲ್ಲಿ ಸಿಲುಕಿದ ಕೂಲಿಕಾರ್ಮಿಕರಿದ್ದ ಟ್ರಾಕ್ಟರ್: ಸ್ಥಳೀಯರ ಸಾಹಸದಿಂದ ರಕ್ಷಣೆ

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಕಲಕೇರಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next