Advertisement

Karnataka Bandh: ಸೆ.29ರಂದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರಜೆ

08:54 PM Sep 28, 2023 | Team Udayavani |

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ವಿಚಾರದಲ್ಲಿ ಕನ್ನಡ ಒಕ್ಕೂಟ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಸೆ.29ರಂದು ಬನ್ನೇರುಘಟ್ಟದ ಜೈವಿಕ ಉದ್ಯಾನವನಕ್ಕೆ ರಜೆ ನೀಡಲಾಗಿದೆ.

Advertisement

ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವೆಗಳು ಸಹ ಬಂದ್‌ ಆಗಲಿವೆ.

ಈ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ವೀಕ್ಷಣೆ ಬರುವ ಸಾರ್ವಜನಿಕರಿಗೆ ಅನಾನುಕೂಲ ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ನಿರ್ದೇಶಕರು ಈ ತೀರ್ಮಾನ ಕೈಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮೃಗಾಲಯ, ಸಿಂಹ, ಹುಲಿ, ಕರಡಿ, ಸಸ್ಯಹಾರಿ ಸಫಾರಿಗಳು ಮತ್ತು ಚಿಟ್ಟೆ ಉದ್ಯಾನವನ ಸೇರಿದಂತೆ ಇತ್ಯಾದಿ ಸೇವೆಗಳು ಸಾರ್ವಜನಿಕರ ದರ್ಶನಕ್ಕೆ ಇರುವುದಿಲ್ಲ. ಅ.3ರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಜೈವಿಕ ಉದ್ಯಾನವನ ತೆರೆದಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next