Advertisement

ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ : ಸಿಎಂ ನೇತೃತ್ವದಲ್ಲಿ ಸಭೆ ಆರಂಭ

06:43 PM Jul 03, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಅನ್ ಲಾಕ್  ಘೋಷಣೆ ಮಾಡಲು ಸಿಎಂ ಯಡಿಯೂರಪ್ಪ ಅಧಿಕಾರಿಗಳು ಮತ್ತು ಸಚಿವರ ಜೊತೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸುತ್ತಿದ್ದಾರೆ.

Advertisement

ಸಭೆಯಲ್ಲಿ ಆರೋಗ್ಯ ಇಲಾಖೆ, ಡಿಸಿಎಂ, ಕಂದಾಯ ಇಲಾಖೆ ಅಧಿಕಾರಿಗಳು, ಕೋವಿಡ್ ಉಸ್ತವಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಇನ್ನು ಶಾಪಿಂಗ್ ಮಾಲ್ ಗಳಿಗೆ ಷರತ್ತು ಬದ್ಧ ಅನುಮತಿಯನ್ನು ನೀಡುವ ಸಾಧ್ಯತೆ ಇದೆ. ಇಷ್ಟೆ ಅಲ್ಲದೆ ದೇವಾಲಯ, ಮಸೀದಿ, ಪ್ರಾರ್ಥನಾ ಮಂದಿರ ಸೇರಿದಂತೆ ಜನ ಸೇರುವ ಪ್ರದೇಶಗಳಿಗೆ ಷರತ್ತಿನ ಮೇಲೆ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದ್ದು, ರಾಜ್ಯದಲ್ಲಿ ಇಂದು 2082 ಮಂದಿಗೆ ಕೋವಿಡ್ ಸೋಂಕು ತಗುಲಿದೆ.  ಇನ್ನು ಸಾವಿನ ಸಂಖ್ಯೆ ಕೂಡ ಇಳಿಮುಖವಾಗಿದ್ದು 86 ಮಂದಿ ಸೋಂಕಿತರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next