Advertisement

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

01:44 PM Sep 07, 2024 | Team Udayavani |

ರಾಂಚಿ: ಆನೆ ದಾಳಿಯ ಭಯದಿಂದ ಜತೆಯಲ್ಲಿ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತದಿಂದ ಮೃತಪಟ್ಟಿರುವ ದಾರುಣ ಘಟನೆ  ಜಾರ್ಖಂಡ್‌ನ ಗರ್ವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿರುವುದಾಗಿ ಶುಕ್ರವಾರ(ಸೆ.6ರಂದು) ಪೊಲೀಸರು ತಿಳಿಸಿದ್ದಾರೆ.

Advertisement

ಚಿನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಚಪ್ಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುವಾರ(ಸೆ.5) ರಾತ್ರಿ ಆನೆ ದಾಳಿಗೆ ಹೆದರಿ ಒಂದೇ ಕುಟುಂಬದ ಸುಮಾರು 8 ರಿಂದ 10 ಮಕ್ಕಳು ತಮ್ಮ ಹೆಂಚಿನ ಮನೆಯ ನೆಲದ ಮೇಲೆ ಮಲಗಿದ್ದರು. ಈ ವೇಳೆ ಮನೆಯೊಳಗೆ ವಿಷಕಾರಿ ಕಾಳಿಂಗ ಸರ್ಪವೊಂದು ಬಂದು ಮೂವರು ಮಕ್ಕಳಿಗೆ ಕಚ್ಚಿದೆ. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬದಲು ಮನೆಯವರು ಮಾಂತ್ರಿಕನ ಮನೆಯೊಂದಕ್ಕೆ ರಾತ್ರಿ 1 ಗಂಟೆಗೆ ಕರೆದುಕೊಂಡು ಹೋಗಿದ್ದಾರೆ. ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನು ಮೂರನೇ ಮಗುವನ್ನು ನಕಲಿ ವೈದ್ಯನ ಬಳಿಕ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಆ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Video: ರೀಲ್ಸ್‌ಗಾಗಿ ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದ ಯುವಕ; ಮಧ್ಯಾಹ್ನದ ವೇಳೆಗೆ ಮೃತ್ಯು

ಪನ್ನೇಲಾಲ್ ಕೊರವ (15), ಕಾಂಚನ್ ಕುಮಾರಿ (8) ಮತ್ತು ಬೇಬಿ ಕುಮಾರಿ (9) ಮೃತ ಮಕ್ಕಳು .

Advertisement

ಕಳೆದ ಕೆಲ ದಿನಗಳಿಂದ ಗ್ರಾಮದಲ್ಲಿ ಆನೆಗಳ ಕಾಟ ವಿಪರೀತವಾಗಿದ್ದು ಇದರಿಂದಾಗಿ ಅಕ್ಕಪಕ್ಕದವರು ಸುರಕ್ಷಿತ ಸ್ಥಳದಲ್ಲಿ ನಿದ್ರೆ ಮಾಡುವ ಪರಿಸ್ಥಿತಿ ಉಂಟಾಗಿದೆ. ಕೆಲವರು ಶಾಲಾ ಕಟ್ಟಡಗಳಲ್ಲಿ ಗ್ರಾಮದಲ್ಲಿ ಒಂದೇ ಸ್ಥಳದಲ್ಲಿ ಗುಂಪುಗಳಾಗಿ ಮಲಗುತ್ತಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next