Advertisement

ಕಾಶ್ಮೀರದಲ್ಲಿ ಗೋಲಿಬಾರ್‌: 3 ಬಲಿ

06:00 AM Jul 08, 2018 | |

ಶ್ರೀನಗರ: ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಪ್ರತಿಭಟನಕಾರರ ನಡುವೆ ಶನಿವಾರವೂ ಘರ್ಷಣೆ ಮುಂದುವರಿದಿದ್ದು, ಪರಿಸ್ಥಿತಿ ಹತೋಟಿಗೆ ತರಲು ಯೋಧರು ನಡೆಸಿದ ಗುಂಡಿನ ದಾಳಿಗೆ ಬಾಲಕಿ ಸಹಿತ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ. ಇಬ್ಬರು ತೀವ್ರ ಗಾಯಗೊಂಡಿದ್ದಾರೆ.

Advertisement

ಪ್ರತ್ಯೇಕತಾವಾದಿಗಳ ಗುಂಪು ಬೆಳಗ್ಗೆ ಏಕಾಏಕಿ ಪ್ರತಿಭಟನೆಗೆ ಮುಂದಾಗಿದ್ದು, ಹವೂರಾ ಮಿಶಿಪೊರಾ ಪ್ರದೇಶ ದಲ್ಲಿ ಪೊಲೀಸರು, ಭದ್ರತಾ ಪಡೆ ಮೇಲೆ ಕಲ್ಲು ತೂರಾಟ ನಡೆಯಿತು. ಗುಂಪನ್ನು ಚದುರಿಸಲು ಭದ್ರತಾ ಪಡೆ ಗುಂಡಿನ ದಾಳಿ ನಡೆಸಿತು. ಕಾರ್ಯಾಚರಣೆ ವೇಳೆ ಗಾಯಗೊಂಡ ಐವರಲ್ಲಿ ಮೂವರು ಮೃತಪಟ್ಟಿದ್ದು, ಇನ್ನಿಬ್ಬರು ಚೇತರಿಸಿಕೊಳ್ಳುತ್ತಿದ್ದಾರೆ.

ಹಿಜ್ಬುಲ್‌ ಮುಜಾಹಿದೀನ್‌ ಕಮಾಂಡರ್‌ ಬುರ್ಹಾನ್‌ ವಾನಿಯನ್ನು ಹತ್ಯೆಗೈದು ರವಿವಾರಕ್ಕೆ ಎರಡು ವರ್ಷವಾಗುವ ಹಿನ್ನೆಲೆಯಲ್ಲಿ ಪ್ರತ್ಯೇಕತಾ ವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next