Advertisement

3 ಕೋಟಿ ಪಡಿತರ ಚೀಟಿ ರದ್ದು: ಸುಪ್ರೀಂ ಗರಂ

01:46 AM Mar 18, 2021 | Team Udayavani |

ಹೊಸದಿಲ್ಲಿ: ಆಧಾರ್‌ ಕಾರ್ಡ್‌ ಜತೆಗೆ ಲಿಂಕ್‌ ಮಾಡಿಲ್ಲ ಎಂಬ ಕಾರಣಕ್ಕಾಗಿ ಮೂರು ಕೋಟಿ ಪಡಿತರ ಚೀಟಿಗಳನ್ನು ರದ್ದು ಮಾಡಿರುವ ಕೇಂದ್ರ ಸರಕಾರದ ಕ್ರಮ ಗಂಭೀರವಾದದ್ದು ಎಂದಿರುವ ಸುಪ್ರೀಂ ಕೋರ್ಟ್‌. ಇಂಥ ಕ್ರಮದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಉತ್ತರ ನೀಡಬೇಕು ಎಂದು ಬುಧವಾರ ಹೇಳಿದೆ.

Advertisement

ಇದು ಕೇಂದ್ರ ಮತ್ತು ರಾಜ್ಯ ಸರಕಾರ ಗಳಿಗೆ ಸಂಬಂಧಪಟ್ಟ ವಿಚಾರವಲ್ಲ. ಶೀಘ್ರ ವೇ ಈ ಬಗ್ಗೆ ಅಂತಿಮ ಹಂತದ ವಿಚಾರಣೆ ನಡೆಸಲಾಗುತ್ತದೆ ಎಂದು ಮುಖ್ಯ ನ್ಯಾಯ ಮೂರ್ತಿ ಎಸ್‌.ಎ. ಬೊಬ್ದೆ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಕೇಂದ್ರ ಸರಕಾರದ ಪರ ವಾದಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಅಮನ್‌ ಲೇಖೀ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ ಎಂಬ ಅರ್ಜಿದಾರರ ಪರ ವಕೀಲ ಕೊಲಿನ್‌ ಗೊನ್ಸಾಲ್ವಿಸ್‌ ಎಂಬ ಮಾತು ಸರಿಯಲ್ಲ ಎಂದು ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿ “ಆಧಾರ್‌ ಲಿಂಕ್‌ ಬಗ್ಗೆ ಕೇಂದ್ರ ಸರಕಾರದ ಪ್ರತಿಕ್ರಿಯೆ ಕೇಳುತ್ತಿದ್ದೇವೆ. ಇದು ಕೇವಲ ರಾಜ್ಯ ಮತ್ತು ಕೇಂದ್ರ ಸರಕಾರಗಳ ನಡುವಿನ ವಿಚಾರ ಇಲ್ಲ. ಅಂತಿಮವಾಗಿ ನಾವೇ ಇದನ್ನು ವಿಚಾರಿಸಬೇಕಾಗಿದೆ. ಹೀಗಾಗಿ ನಾಲ್ಕು ವಾರಗಳಲ್ಲಿ ಉತ್ತರ ನೀಡಬೇಕು’ ಲೇಖೀ ಅವರಿಗೆ ಸೂಚಿಸಿತು.

Advertisement

Udayavani is now on Telegram. Click here to join our channel and stay updated with the latest news.

Next