Advertisement

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

11:51 PM May 21, 2024 | Team Udayavani |

ಭುವನೇಶ್ವರ: “ಪುರಿ ಜಗನ್ನಾಥನೇ ಮೋದಿ ಭಕ್ತ’ ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಬಿಜೆಪಿ ನಾಯಕ ಸಂಬಿತ್‌ ಪಾತ್ರಾ ಮಂಗಳವಾರ ತಮ್ಮ ಹೇಳಿಕೆಗಾಗಿ ಕ್ಷಮೆ ಯಾಚಿಸಿದ್ದಾರೆ. ಇಂಥ ಹೇಳಿಕೆಗೆ ಪ್ರಾಯಶ್ಚಿತ್ತವಾಗಿ ಮಂಗಳವಾರದಿಂದ 3 ದಿನ ಉಪವಾಸ ವ್ರತ ಕೈಗೊಳ್ಳುತ್ತಿರುವುದಾಗಿ ಘೋಷಿಸಿದ್ದಾರೆ. “ನನ್ನ ತಪ್ಪಿಗಾಗಿ ಪ್ರಾಯಶ್ಚಿತ್ತ ಕೈಗೊಳ್ಳಲು 3 ದಿನ ಉಪವಾಸ ಕೈಗೊಳ್ಳಲಿದ್ದೇನೆ’ ಎಂದಿದ್ದಾರೆ. ಪಾತ್ರಾ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದಂತೆ ಅವರಿಂದ ಈ ಸ್ಪಷ್ಟನೆ ಹೊರಬಿದ್ದಿದೆ.

Advertisement

ಮೋದಿ ಕ್ಷಮೆಗೆ ಕಾಂಗ್ರೆಸ್‌ ಪಟ್ಟು

ಪಾತ್ರಾ ಏನಾದರೂ ಕಾಂಗ್ರೆಸ್‌ನಲ್ಲಿದ್ದಿದ್ದರೆ ಕೋಟ್ಯಂತರ ಭಕ್ತರ ಭಾವನೆಗಳೊಂದಿಗೆ ಆಟವಾಡಿದ್ದಕ್ಕೆ ಅವರನ್ನು ಕೂಡಲೇ ಉಚ್ಚಾಟಿಸುತ್ತಿದ್ದೆವು ಎಂದು ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ಹೇಳಿದ್ದಾರೆ. ಜತೆಗೆ, ಪ್ರಧಾನಿ ಮೋದಿಯವರೂ ಜಗನ್ನಾಥನ ಭಕ್ತರ ಕ್ಷಮೆ ಯಾಚಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next