Advertisement

ಬೊಮ್ಮಾಯಿ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳು ; ಯಾರಿಗೆ ಒಲಿದಿದೆ ಡಿಸಿಎಂ ಪಟ್ಟ ?

09:41 PM Jul 27, 2021 | Team Udayavani |

ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಸಿಎಂ ಘೋಷಣೆಯಾದ ಬೆನ್ನಲ್ಲೆ ಮೂವರು ಡಿಸಿಎಂಗಳನ್ನು ಕೂಡ ಘೋಷಣೆ ಮಾಡಲಾಗಿದೆ.

Advertisement

ಇಂದು (ಜು.27) ಸಂಜೆ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಬಸವರಾಜ್ ಬೊಮ್ಮಾಯಿ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಇದರ ಬೆನ್ನಲ್ಲೆ ಮೂವರನ್ನು ಉಪಮುಖ್ಯಮಂತ್ರಿಗಳನ್ನೂ ಘೋಷಣೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಆರ್. ಅಶೋಕ, ಶ್ರೀರಾಮುಲು ಹಾಗೂ ಗೋವಿಂದ್ ಕಾರಜೋಳ ಅವರು ಡಿಸಿಎಂ ಗಳಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರಂತೆ.

ನಾಳೆ ಪದಗ್ರಹಣ  

ಇನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಮುಖ್ಯ ಮಂತ್ರಿಯಾಗಿ ಆಯ್ಕೆಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರು ನಾಳೆ (ಜು.28) 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಪದಗ್ರಹಣ ಮಾಡುವ ಸಾಧ್ಯತೆ ಇದೆ.

Advertisement

ಸರ್ಕಾರ ರಚನೆಗೆ ಹಕ್ಕು ಮಂಡನೆ :

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಇಂದು ಶಾಸಕಾಂಗ ಸಭೆಯ ಬಳಿಕ ನೇರವಾರ ರಾಜಭವನಕ್ಕೆ ತೆರಳಿದ ಬೊಮ್ಮಾಯಿ ಅವರು ರಾಜ್ಯಪಾಲ ಗೆಹ್ಲೊಟ್ ಅವರಲ್ಲಿ ಸರ್ಕಾರ ರಚಿಸಲು ಅನುಮಯಿ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಬಿ.ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ಗಣ್ಯರು ನಿಯೋಜಿತ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಜೊತೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next