Advertisement

3 DCMs ಚುನಾವಣೆ ದೃಷ್ಟಿಯಿಂದ ಸೂಕ್ತ: ಸಚಿವ ರಾಜಣ್ಣ

12:50 AM Jan 05, 2024 | Vishnudas Patil |

ತುಮಕೂರು: ಲೋಕಸಭಾ ಚುನಾವಣೆ ಹಿತದೃಷ್ಟಿಯಿಂದ ಕರ್ನಾಟಕದಲ್ಲಿ ಮೂರು ಡಿಸಿಎಂ ಮಾಡುವುದು ಸೂಕ್ತ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.

Advertisement

ನಗರದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಮೂವರು ಉಪ ಮುಖ್ಯಮಂತ್ರಿಗಳನ್ನು ಮಾಡಿದೆ. ಹಾಗೆಯೇ ಕರ್ನಾಟಕದಲ್ಲೂ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ಒಳ್ಳೆಯದು ಎಂದರು.

ಈ ವಿಷಯವನ್ನು ಹೈಕಮಾಂಡ್‌ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸುವುದು ಬೇಡ ಎಂದು ಹೈಕಮಾಂಡ್‌ ಹೇಳಿದೆ. ಅದರಂತೆ ಸುಮ್ಮನಿ¨ªೆ. ಈಗ ನನ್ನ ಹಿಂದಿನ ಹೇಳಿಕೆಗೆ ಬದ್ಧನಾಗಿದ್ದೇನೆ. ಮೂರು ಉಪ ಮುಖ್ಯಮಂತ್ರಿ ಬಗ್ಗೆ ಡಾ| ಜಿ. ಪರಮೇಶ್ವರ್‌ ಮತ್ತು ಸತೀಶ್‌ ಜಾರಕಿಹೊಳಿ ಕೂಡ ಪ್ರಸ್ತಾವಿಸಿ¨ªಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next