Advertisement

ಅಮರಾವತಿ: ಚಂದ್ರಬಾಬು ನಾಯ್ದು ರ್‍ಯಾಲಿ ವೇಳೆ ಮತ್ತೆ ಕಾಲ್ತುಳಿತ, 3 ಸಾವು, ಹಲವರಿಗೆ ಗಾಯ

12:30 AM Jan 02, 2023 | Team Udayavani |

ಅಮರಾವತಿ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಅವರು ಗುಂಟೂರಿನಲ್ಲಿ ಆಯೋಜಿಸಿದ್ದ “ಸಂಕ್ರಾಂತಿ ಉಡುಗೊರೆ ವಿತರಣೆ’ ಕಾರ್ಯಕ್ರಮದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ.

Advertisement

ಬುಧವಾರವಷ್ಟೇ ನೆಲ್ಲೂರು ಜಿಲ್ಲೆಯಲ್ಲಿ ನಾಯ್ಡು ಅವರ ರೋಡ್‌ಶೋ ವೇಳೆ ಕಾಲ್ತುಳಿತ ಉಂಟಾಗಿ 8 ಮಂದಿ ಮೃತಪಟ್ಟು, 5 ಮಂದಿ ಗಾಯಗೊಂಡಿದ್ದರು. ರವಿವಾರ ಗುಂಟೂರಿನ ವಿಕಾಸ್‌ನಗರದಲ್ಲಿ ಉಡುಗೊರೆ ವಿತರಣೆ ನಡೆಯುತ್ತಿತ್ತು. ಭಾರೀ ಸಂಖ್ಯೆಯ ಮಹಿಳೆಯರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತು ಎಂದು ಪೊಲೀಸರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next