Advertisement

ಬೈಕಿಗೆ ಮದುವೆ ದಿಬ್ಬಣದ ಬಸ್ ಡಿಕ್ಕಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

09:46 AM Feb 17, 2020 | sudhir |

ಶಿವಮೊಗ್ಗ ; ಬೈಕಿಗೆ ಮದುವೆ ದಿಬ್ಬಣದ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಗಂಡ, ಹೆಂಡತಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭದ್ರಾವತಿ ತಾಲೂಕಿನ ಮೂಡಲವಿಠಲಾಪುರ ಬಳಿ ರವಿವಾರ ಸಂಭವಿಸಿದೆ.

Advertisement

ಹನುಂತಾಪುರದ ವೀರಪ್ಪ(45), ಆಶಾ(34), ಹೇಮಂತ್ (7) ಮೃತ ದುರ್ದೈವಿಗಳು.

ಹನುಮಂತಾಪುರದಿಂದ ವೀರಪ್ಪ ಮಗ ಹೇಮಂತ್ ನೊಂದಿಗೆ ತನ್ನ ಗರ್ಭಿಣಿ ಪತ್ನಿಯನ್ನು ಹೊಳೆಹೊನ್ನೂರಿನ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆಂದು ಕರೆದೊಯ್ಯುವಾಗ ಶಿವಮೊಗ್ಗದಲ್ಲಿ ಮದುವೆ ಮುಗಿಸಿಕೊಂಡು ಗುಡುಮಘಟ್ಟಕ್ಕೆ ತೆರಳುತ್ತಿದ್ದ ದಿಬ್ಬಣದ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಆಶಾ ಹಾಗೂ ಹೇಮಂತ್ ದೇಹಗಳು ಛಿದ್ರ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

Advertisement

Udayavani is now on Telegram. Click here to join our channel and stay updated with the latest news.

Next