Advertisement

ಮೂರು ಶ್ವಾನಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

12:56 PM Oct 12, 2021 | Team Udayavani |

ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ತಂಡ ದೊಂದಿಗೆ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮೂರು ಶ್ವಾನಗಳನ್ನು ಗೌರವ ಪೂರ್ವಕವಾಗಿ ಕೆಎಐಎಲ್‌ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.

Advertisement

ಇದನ್ನೂ ಓದಿ;- ಆರ್ ಎಸ್ ಎಸ್ ವಿರುದ್ಧ 1977ರಿಂದಲೂ ನಾನು ಮಾತನಾಡುತ್ತಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ

ರಾನೋ, ಕಿಮಿ ಮತ್ತು ಸ್ಟಾಫಿ ಹೆಸರಿನ ಲ್ಯಾಬ್ರಡಾರ್‌ ಶ್ವಾನಗಳು ಕಳೆದ 10 ವರ್ಷಗಳಿಂದ ವಿಮಾನ ನಿಲ್ದಾಣದ ಭದ್ರತೆಯಲ್ಲಿ ವಿವಿಧ ವಿಧ್ವಂಸಕ ವಿರೋಧಿ ಕರ್ತವ್ಯದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿವೆ. ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ದೇಶ-ವಿದೇಶ, ವಿವಿಧ ರಾಜ್ಯಗಳಿಂದ ಪ್ರಯಾಣಿಕರು ಬರುತ್ತಾರೆ. 24×7ನಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಇದರ ಗೌರವಾರ್ಥವಾಗಿ ಶ್ವಾನಗಳಿಗೆ ಪದಕ ನೀಡಿ ಗೌರವಿಸಲಾಗಿದೆ. ಈ ಶ್ವಾನಗಳು ಸಲ್ಲಿಸಿದ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next