Advertisement

ತಮಿಳುನಾಡು: ಧಾರಾಕಾರ ಮಳೆಗೆ 3 ಮನೆ ಕುಸಿದು ಬಿದ್ದು 15 ಮಂದಿ ಸಾವು

09:57 AM Dec 03, 2019 | Team Udayavani |

ಚೆನ್ನೈ:ಹಿಂದೂ ಮಹಾಸಾಗರ  ಮತ್ತು ಅರಬ್ಬಿ ಸಮುದ್ದರ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಕೇರಳದಲ್ಲಿ ವರುಣನ ಆರ್ಭಟ ಆರಂಭವಾಗಿದೆ. ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಮೆಟ್ಟೂರುಪಾಳ್ಯಂನ ನಾಡೂರ್ ಕಣ್ಣಪ್ಪನ್ ಲೇಔಟ್ ನಲ್ಲಿ ಮನೆ ಹಾಗೂ ಕಂಪೌಂಡ್ ಗೋಡೆ ಕುಸಿದು 15 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

Advertisement

ಧಾರಾಕಾರ ಮಳೆಗೆ ಮೂರು ಮನೆಗಳು ಕುಸಿದು ಬಿದ್ದಿದ್ದು, ಈವರೆಗೆ ಅವಶೇಷಗಳಡಿ ಸಿಲುಕಿದ್ದ 12 ಶವಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿಯಲ್ಲಿ ಸೋಮವಾರ ಎಲ್ಲ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಚೆನ್ನೈನಲ್ಲಿ ನೂರಾರು ಮನೆಗಳಿಗೆ ನೀರು ನುಗ್ಗಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next