Advertisement

ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಕೃಷ್ಣಾನದಿಗೆ 3 ಲಕ್ಷ ಕ್ಯೂಸೆಕ್ ನೀರು

05:11 PM Jul 23, 2021 | Team Udayavani |

ವಿಜಯಪುರ : ಜಿಲ್ಲೆಯ ಜೀವನದಿ ಕೃಷ್ಣೆ ಮತ್ತೆ ಭೋರ್ಗರೆಯುತ್ತಿದ್ದಾಳೆ. ಆಲಮಟ್ಟಿ ಲಾಲ ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಮಹಾರಾಷ್ಟ್ರ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಒಳ ಹರಿವು ಹೆಚ್ಚಾಗಿದ್ದು, ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರನ್ನು ನದಿ ಮೂಲಕ ಹೊರ ಬಿಡಲಾಗುತ್ತಿದೆ.

Advertisement

ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯದ ಎಲ್ಲ 26 ಗೇಟ್ ತೆರೆದು ಕೃಷ್ಣಾ ನದಿಗೆ 2,57,000 ಕ್ಯೂಸೆಕ್ ನೀರು ಹರಿ ಬಿಡಲಾಗುತ್ತಿದೆ. ಇದಲ್ಲದೇ ಆಲಮಟ್ಟಿ ಕೆಪಿಸಿಎಲ್ ಜಲ ವಿದ್ಯುತ್ ಘಟಕಕ್ಕೆ 42,500 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಇದರ ಹೊರತಾಗಿ ವಿವಿಧ ಕಾಲುವೆಗಳಿಂದ 500 ಕ್ಯೂಸೆಕ್ ನೀರೂ ಹೊರಗೆ ಬಿಡಲಾಗುತ್ತಿದೆ.

ಹೀಗೆ ಆಲಮಟ್ಟಿ ಲಾಲ ಬಹಾದ್ದೂರ ಶಾಸ್ತ್ರಿ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರನ್ನು ನದಿಪಾತ್ರಕ್ಕೆ  ಹೊರಬಿಡಲಾಗುತ್ತಿದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next