Advertisement

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಸಂಹಾರ; ವರ್ಷಾರಂಭದಿಂದ ಇದುವರೆಗೆ 39 ಮಂದಿ ಹತ್ಯೆ

11:02 AM Mar 16, 2022 | Team Udayavani |

ಶ್ರೀನಗರ : ನಗರದ ಹೊರವಲಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಖಾನ್ಮೋಹ್‌ನ ಸರಪಂಚ್‌ನ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮೂವರು ಲಷ್ಕರ್-ಎ-ತೊಯ್ಬಾ ಸಂಘಟನೆಯ ಉಗ್ರರನ್ನು ಬುಧವಾರ ಭದ್ರತಾ ಪಡೆಗಳು ಹೊಡೆದುರುಳಿಸಿವೆ.

Advertisement

ಕಾರ್ಯಾಚರಣೆಯ ಕುರಿತು ವಿವರಗಳನ್ನು ಹಂಚಿಕೊಂಡ ಕಾಶ್ಮೀರ ದ ಐಜಿಪಿ ವಿಜಯ್ ಕುಮಾರ್, “ಶ್ರೀನಗರ ಜಿಲ್ಲೆಯ ಹೊರವಲಯದಲ್ಲಿರುವ ನೌಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನೌಗಾಮ್ ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಯ/ ಟಿಆರ್ ಎಫ್ ನ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಹತ್ಯೆಗೀಡಾಗಿರುವ ಮೂವರೂ ಇತ್ತೀಚಿಗೆ ನಡೆದ ಸರಪಂಚ್ ಸಮೀರ್ ಭಟ್ ಅವರ ಹತ್ಯೆಯ ಪ್ರಮುಖ ಆರೋಪಿಗಳಾಗಿದ್ದರು ಎಂದು ತಿಳಿದು ಬಂದಿದೆ.

ನೌಗಾಮ್ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಖಚಿತ ಮಾಹಿತಿಯ ಪ್ರಕಾರ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಮಂಗಳವಾರ, ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಚಾರ್ಸೂ ಪ್ರದೇಶದಲ್ಲಿ ಎಲ್‌ಇಟಿ ಉಗ್ರನನ್ನು ಹತ್ಯೆಗೈಯಲಾಗಿತ್ತು. ಈ ವರ್ಷದ ಆರಂಭದಿಂದ ನಡೆದ 22 ನೇ ಎನ್‌ಕೌಂಟರ್ ಆಗಿದ್ದು, ಇದುವರೆಗೆ ಭದ್ರತಾ ಸಿಬ್ಬಂದಿಗಳು ಒಟ್ಟು 39 ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next