Advertisement

ಒಡಿಶಾ ಪೊಲೀಸರ ಕಾರ್ಯಾಚರಣೆ: ಮೂವರು ನಕ್ಸಲರ ಎನ್‌ಕೌಂಟರ್‌!

07:51 PM May 09, 2023 | Team Udayavani |

ಭುವನೇಶ್ವರ: ಒಡಿಶಾದ ಕಾಲಹಂಡಿ ಜಿಲ್ಲೆಯಲ್ಲಿ ಮಂಗಳವಾರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಮಾವೋವಾದಿ (ನಕ್ಸಲರನ್ನು)ಗಳನ್ನು ಹೊಡೆದುರುಳಿಸಲಾಗಿದೆ.

Advertisement

ಈ ವೇಳೆ ಓರ್ವ ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ತಪರೆಂಗ್‌-ಲುಡೆನ್‌ಗಢ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಸುಳಿವಿನ ಮೇರೆಗೆ ಮಂಗಳವಾರ ಮುಂಜಾವಿನಿಂದಲೇ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ವೇಳೆ ಪೊಲೀಸರು ಹಾಗೂ ನಕ್ಸಲರ ಮುಖಾಮುಖೀಯಲ್ಲಿ ಓರ್ವ ಸಿಬ್ಬಂದಿಗೆ ಗುಂಡೇಟು ತಗುಲಿದೆ.

ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಹತ ನಕ್ಸಲರಿಂದ ಎಕೆ-47 ರೈಫ‌ಲ್‌ ಒಂದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಸೋಲಿಗರ ಭಾವ ಎಂದೇ ಕರೆಯುವ ಬಿಳಿಗಿರಿ ರಂಗಪ್ಪ | Soliga | ಬಿಳಿಗಿರಿರಂಗನ ಬೆಟ್ಟ

Advertisement

Udayavani is now on Telegram. Click here to join our channel and stay updated with the latest news.

Next