Advertisement

Chhattisgarh: ನಕ್ಸಲರ ಅಟ್ಟಹಾಸಕ್ಕೆ 3 ಭದ್ರತಾ ಸಿಬಂದಿ ಬಲಿ,14 ಮಂದಿಗೆ ಗಾಯ

07:16 PM Jan 30, 2024 | Team Udayavani |

ರಾಯ್‌ಪುರ: ಛತ್ತೀಸ್‌ಗಢದ ಬಿಜಾಪುರ-ಸುಕ್ಮಾ ಗಡಿಯಲ್ಲಿನ ಜೋನಗುಡಾ ಮತ್ತು ಅಲಿಗುಡಾ ಬಳಿ ಮಂಗಳವಾರ ನಕ್ಸಲರೊಂದಿಗೆ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ.

Advertisement

ಅಧಿಕಾರಿಗಳ ಪ್ರಕಾರ, ಸಿಬಂದಿ ಸುಕ್ಮಾ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ.ನಕ್ಸಲ್ ಚಟುವಟಿಕೆಗಳ ಮೇಲೆ ನಿಗಾ ಇರಿಸಲು, ಬಿಜಾಪುರ-ಸುಕ್ಮಾ ಗಡಿಯಲ್ಲಿರುವ ಟೇಕಲ್‌ಗುಡೆಮ್‌ನಲ್ಲಿ ಪ್ರದೇಶದ ಜನರಿಗೆ ಮೂಲ ಸೌಕರ್ಯಗಳೊಂದಿಗೆ ಅನುಕೂಲವಾಗಲು ಇಂದು ಹೊಸ ಭದ್ರತಾ ಶಿಬಿರವನ್ನು ಸ್ಥಾಪಿಸಲಾಗಿತ್ತು.

ಶಿಬಿರವನ್ನು ಸ್ಥಾಪಿಸಿದ ನಂತರ, ಜೋನಗುಡ-ಅಲಿಗುಡ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಮಾವೋವಾದಿಗಳು ಕೋಬ್ರಾ/ಎಸ್‌ಟಿಎಫ್/ಡಿಆರ್‌ಜಿ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಎನ್‌ಕೌಂಟರ್ ಬಳಿಕ ಮಾವೋವಾದಿಗಳು ಕಾಡಿನೊಳಗೆ ಪರಾರಿಯಾಗಿದ್ದಾರೆ.

ಗಾಯಗೊಂಡ ಎಲ್ಲಾ 14 ಭದ್ರತಾ ಸಿಬಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ವಿಮಾನದಲ್ಲಿ ರವಾನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next