Advertisement

ಹೆಬ್ರಿ : ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

03:32 PM Nov 26, 2021 | Team Udayavani |

ಹೆಬ್ರಿ : ಶಿವಪುರ ಗ್ರಾಮದ ಭಟ್ರಾಡಿ ಹೊಳೆಗೆ ಈಜಲು ಹೋದ ವಿದ್ಯಾರ್ಥಿಗಳಲ್ಲಿ ಮೂವರು ನೀರುಪಾಲದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

Advertisement

ಹಿರಿಯಡಕ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಪಾಡಿಗಾರ ಮೂಲದ ಸುದರ್ಶನ್(17) ,ಕಿರಣ್ (17)ಹಾಗೂ ಹಿರಿಯಡಕದ ಸೋನಿಶ್ (18) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಮೂವರ ಶವಗಳನ್ನು ಮೇಲಕ್ಕೆತ್ತಲಾಗಿದ್ದು, ಸ್ಥಳಕ್ಕೆ ಹೆಬ್ರಿ ಠಾಣೆಯ ಪೊಲೀಸರು, ತಹಶೀಲ್ದಾರ್ ಅವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಒಟ್ಟು 12 ವಿದ್ಯಾರ್ಥಿಗಳು ಕಾಲೇಜಿಗೆಂದು ಮನೆಯಿಂದ ಹೊರಟವರು ಕಾಲೇಜಿಗೆ ಹೋಗದೆ ಈಜಲೆಂದು ಹೊಳೆಗೆ ಹೋಗಿದ್ದರು. ಅಳವಾದ ಪ್ರದೇಶದಲ್ಲಿ ಸ್ಥಾನಕ್ಕೆ ಇಳಿದವರು ನಿಯಂತ್ರಣ ಕಳೆದುಕೊಂಡಿದ್ದು, ಮೂವರು ನೀರುಪಾಲಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next